ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ನಟ ಎಸ್.ಶಿವರಾಂ ಭೇಟಿ
ಲೋಕದರ್ಶನ ವರದಿ
ಉಗರಗೋಳ, 24: ಐತಿಹಾಸಿಕ ಪ್ರೇಕ್ಷಣೀಯ ಸ್ಥಳ, ಕಣ್ಕುಕ್ಕುವಂತಿರುವ ಗ್ರಾಮೀಣ ಸೊಗಡು ಹಾಗೂ ಪ್ರಾಚೀನತೆ ಹೊಂದಿರುವ ನಾಡು ಉತ್ತರ ಕನರ್ಾಟಕ. ದಕ್ಷಿಣ ಕನರ್ಾಟಕ ರಾಗದಂತಿದ್ದರೆ, ಉತ್ತರ ಕನರ್ಾಟಕವು ಲಯವಿದ್ದ ಹಾಗೇ ಎಂದು ಚಲನಚಿತ್ರ ಹಿರಿಯ ನಟ ಎಸ್.ಶಿವರಾಂ ಹೇಳಿದರು.ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಸೋಮವಾರ ಭೇಟಿ ನೀಡಿ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದರ್ಶನಾಶೀವರ್ಾದ ಪಡೆದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
50 ವರ್ಷಗಳ ಹಿಂದಿನಿಂದಲೂ ಉತ್ತರ ಕನರ್ಾಟಕ ಭಾಗದಲ್ಲಿ ಚಿತ್ರೀಕರಣಗೊಂಡ ಹತ್ತಾರು ಚಲನಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಯಲ್ಲಮ್ಮ ದೇವಿಯ ಅನುಗ್ರಹದಿಂದ ಆರೋಗ್ಯ ಸದೃಢವಾಗಿದೆ. ಮುಂಬರುವ ದಿನಗಳಲ್ಲೂ ಈ ಭಾಗದ ಚಲನಚಿತ್ರಗಳಲ್ಲಿ ನಟನೆಗೆ ಸಿದ್ಧವೆಂದರು.
ಈ ಹಿಂದೆ ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದೆ. ಇನ್ಮುಂದೆ ಉತ್ತರ ಕನರ್ಾಟಕದ ಅಭಿವೃದ್ಧಿ ದಿಸೆಯಿಂದ ಯಾವುದೇ ಹೋರಾಟ ನಡೆದರೂ ಪಾಲ್ಗೊಳ್ಳಲು ಸಿದ್ಧನಿದ್ದೇನೆ ಎಂದು ಅವರು ಹೇಳಿದರು.
ಯಲ್ಲಮ್ಮ ದೇವಸ್ಥಾನದ ಸಹಾಯಕ ಕಾರ್ಯನಿವರ್ಾಹಕ ಅಧಿಕಾರಿ ಬಸವರಾಜ ಜೀರಗ್ಯಾಳ, ಬೆಂಗಳೂರಿನ ಧ್ರುವರಾಜ್, ಹಿರೇನಲ್ಲೂರಿನ ಶ್ರೀನಿವಾಸ, ಎಚ್.ಸಿ.ಸಿದ್ಧಸಮುದ್ರ, ವಿ.ಪಿ.ಸೊನ್ನದ, ಸಿದ್ದರಾಮಯ್ಯ ಅರಗಂಜಿ ಮತ್ತಿತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 