ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ನಿರಾಕರಿಸಿದ ನಟ ಸುದೀಪ್
Actor Sudeep refused the best actor state award
ಬೆಂಗಳೂರು: ‘ಪೈಲ್ವಾನ್’ ಚಿತ್ರಕ್ಕಾಗಿ ತಮಗೆ ಘೋಷಣೆಯಾಗಿದ್ದ 2019ನೇ ಸಾಲಿನ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ನಟ ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ.
ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಪ್ರಶಸ್ತಿಯನ್ನು ನಿರಾಕರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಮತ್ತು ತಮ್ಮನ್ನು ಆಯ್ಕೆ ತೀರ್ಪುಗಾರರಿಗೆ ಕ್ಷಮೆ ಕೋರಿದ್ದಾರೆ.
'ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಧನ್ಯವಾದಗಳು. ಆದರೆ, ನಾನು ಹಲವಾರು ವರ್ಷಗಳಿಂದ ಯಾವುದೇ ಪ್ರಶಸ್ತಿಗಳನ್ನು ಸ್ವೀಕರಿಸುತ್ತಿಲ್ಲ. ನನ್ನ ವೈಯಕ್ತಿಕ ಕಾರಣಗಳಿಂದಾಗಿ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನ್ನನ್ನು ಹೊರತುಪಡಿಸಿ ಅನೇಕ ಅರ್ಹ ನಟರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಮತ್ತು ನನಗಿಂತ ಹೆಚ್ಚಾಗಿ ಅವರಿಗೇ ಈ ಪ್ರಶಸ್ತಿ ಸಿಗಬೇಕು. ಅವರಲ್ಲಿ ಒಬ್ಬರು ಇದನ್ನು ಸ್ವೀಕರಿಸುವುದನ್ನು ನೋಡುವುದು ನನಗೆ ಹೆಚ್ಚು ಸಂತೋಷ ನೀಡುತ್ತದೆ' ಎಂದಿದ್ದಾರೆ.
ಮುಂದುವರಿದು, ಜನರನ್ನು ರಂಜಿಸುವ ನನ್ನ ಕೆಲಸ ಯಾವಾಗಲೂ ಮುಂದುವರಿಯುತ್ತದೆ ಮತ್ತು ನಾನು ಯಾವುದೇ ಪ್ರಶಸ್ತಿಗಳ ನಿರೀಕ್ಷೆಯನ್ನು ಇಟ್ಟುಕೊಂಡಿಲ್ಲ. ತೀರ್ಪುಗಾರರು ನನ್ನನ್ನು ಆಯ್ಕೆ ಮಾಡಿರುವುದು ನಾನು ಮತ್ತಷ್ಟು ಉತ್ತಮವಾಗಿ ಕೆಲಸ ಮಾಡಲು ನನಗೆ ಉತ್ತೇಜನ ನೀಡುತ್ತದೆ ಎಂದು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 