ಬೆಂಗಳೂರು 07: ಭಾರೀ ಪ್ರಮಾಣದ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮೂರು ದಿನಗಳ ಕಾಲ ಕಂದಾಯ ಗುಪ್ತಚರ ನಿರ್ದೇಶನಾಲಯದ ( ಡಿಆರ್ಐ ) ಕಸ್ಟಡಿಗೆ ನೀಡಿದೆ.
ದುಬೈನಿಂದ 14.2 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್ ಳನ್ನು ಬಂಧಿಸಲಾಗಿತ್ತು.
ಕಳ್ಳಸಾಗಣೆ ಮಾಡಿದ ಚಿನ್ನದ ಮೂಲ ಮತ್ತು ಅದನ್ನು ಸ್ವೀಕರಿಸುವವರ ಬಗ್ಗೆ ತನಿಖೆ ನಡೆಸಲು ಕಸ್ಟಡಿಗೆ ವಿಚಾರಣೆಗೆ ಒಳಪಡಿಸುವಂತೆ ಡಿಆರ್ಐ ಕೋರಿತ್ತು. ಇದು ರಾಷ್ಟ್ರವಿರೋಧಿ ಚಟುವಟಿಕೆಗಳಿಗೆ ಸಂಭಾವ್ಯ ಸಂಬಂಧವನ್ನು ಸೂಚಿಸುತ್ತದೆ ಎಂದು ಹೇಳಿದೆ. ನ್ಯಾಯಾಲಯವು ಕೋರಿಕೆಯನ್ನು ಒಪ್ಪಿಕೊಂಡು, ಪ್ರಕರಣದ ಕುರಿತು ಹೆಚ್ಚಿನ ತನಿಖೆಗೆ ಅವಕಾಶ ನೀಡಿದೆ.