ಶಾಹುಮಹಾರಾಜರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಿ: ಐಹೊಳೆ
ಛತ್ರಪತಿ ಶಾಹುಮಹಾರಾಜರ 144ನೇ ಜಯಂತ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಛತ್ರಪತಿ ಶಾಹುಮಹಾರಾಜರ ಭಾವಚಿತ್ರಕ್ಕೆ ಯುವಧುರೀಣ ತ
ರಾಯಬಾಗ 27: ಛತ್ರಪತಿ ಶಾಹುಮಹಾರಾಜರು ದೀನ ದಲಿತರ ಹಾಗೂ ಹಿಂದುಳಿದ ವರ್ಗಗಳು ಸೇರಿದಂತೆ ಶೋಷಿತ ಸಮುದಾಯಗಳ ಕಲ್ಯಾಣಕ್ಕೆ ಶ್ರಮಿಸಿದ್ದಾರೆ. ಎಲ್ಲ ಶೋಷಿತ ಸಮುದಾಯದವರು ಅವರ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಶಾಸಕ ಡಿ.ಎಮ್.ಐಹೊಳೆ ಕರೆ ನೀಡಿದರು.
ಗುರುವಾರ ಪಟ್ಟಣ ಅಂಬೇಡ್ಕರ್ ವೃತ್ತದಲ್ಲಿ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಆಶ್ರಯದಲ್ಲಿ ಬಹುಜನ ರಕ್ಷಣಾ ವೇದಿಕೆಯ ವತಿಯಂದ ಹಮ್ಮಿಕೊಂಡಿದ್ದ ಛತ್ರಪತಿ ಶಾಹುಮಹಾರಾಜರ 144ನೇ ಜಯಂತ್ಯೋತ್ಸವವನ್ನು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯುವ ಧುರೀಣ ತ್ರಿಕಾಲ ಪಾಟೀಲ ಅವರು ಅಂಬೇಡ್ಕರ ವೃತ್ತದಲ್ಲಿ ಛತ್ರಪತಿ ಶಾಹುಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಮೆರವಣಿಗೆಯಲ್ಲಿ ಆಕರ್ಷಕ ಕಲಾತಂಡಗಳು ಭಾಗವಹಿಸಿ ಸಾರ್ವಜನಿಕರ ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಪಟ್ಟಣದ ಮಾಯಾ ಸಂಗೀತ ನೃತ್ಯ ನಾಟಕ ಅಕಾಡೆಮೆಯಿಂದ ಸಂಗೀತ ಕಾರ್ಯಕ್ರಮ ನಡೆಯಿತು.
ಬೆಳಗಾವಿ ಕನ್ನಡ ಸಂಸ್ಕೃತಿ ಇಲಾಖೆ ಉಪನಿದರ್ೇಶಕ ಶ್ರೀಶೈಲ ಕರಿಶಂಕರಿ, ಉಪನ್ಯಾಸಕ ಡಾ.ಅರುಣ ಕಾಂಬಳೆ, ಮಲ್ಲೇಶ ಚವ್ಹಾಣ, ಅಶೋಕ ಭೋಸಲೆ, ಸಾಗರ ಪರಾಂಜಪೆ, ವೀರಪಾಕ್ಷ ಮಾದರ, ರಸೂಲ ಮೋಮಿನ, ರಾಮಚಂದ್ರ ಕಾಂಬಳೆ, ಉಮೇಶ ಮನೋಜೆ, ಶ್ಯಾಮ ಅವಳೆ, ದಿಲೀಪ ಪಾಯನ್ನವರ, ಸತ್ತಾರ ಮುಲ್ಲಾ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 