ಲಕ್ನೋ-ಆಗ್ರಾ ಎಕ್ಸ್ಪ್ರೆಸ್ ನಲ್ಲಿ ಹೆಚ್ಚುವರಿ ಪೆಟ್ರೋಲ್ ಬಂಕ್: ಯೋಗಿ
ಲಕ್ನೋ, ಜೂನ್ 18 : 302 ಕಿಲೋಮಿಟರ್ ಉದ್ದದ ಗ್ರೀನ್ಫೀಲ್ಡ್ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಪೆಟ್ರೋಲ್ ಪಂಪ್ ಮತ್ತು ತಿಂಡಿ ತಿನಿಸುಗಳ ಮಳಿಗೆಗಳನ್ನು ತೆರೆಯಲಾಗುವುದು. ಸೋಮವಾರ ರಾತ್ರಿ ಇಲ್ಲಿ ನಡೆದ ಪಗ್ರತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಬಗ್ಗೆ ನಿರ್ದೇಶನ ನೀಡಿದ್ದಾರೆ. ಈ ಎಕ್ಸ್ಪ್ರೆಸ್ವೇಯಲ್ಲಿ ಈಗಾಗಲೇ ಎರಡು ಪೆಟ್ರೋಲ್ ಪಂಪ್ಗಳು ಮತ್ತು ವಿಶ್ರಾಂತಿ ವಲಯವಿದೆ. ಅಪಘಾತದ ಸಮಯದಲ್ಲಿ ಜನರಿಗೆ ಪರಿಹಾರ ಒದಗಿಸಲು ಎಕ್ಸ್ಪ್ರೆಸ್ವೇ ನಲ್ಲಿ ಟ್ರಾಮ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಅವರು ಸೂಚನೆ ಕೊಟ್ಟಿದ್ದಾರೆ ಎಕ್ಸ್ಪ್ರೆಸ್ವೇಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು ಪರಿಣಾಮ ಸಾವು- ನೋವು ಸಂಭವಿಸುತ್ತಿದೆ. ಸೋಮವಾರ, ಐಪಿಎಸ್ ಅಧಿಕಾರಿಯೊಬ್ಬರು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದಾರೆ, ಟ್ರಾಮ ಕೇಂದ್ರವು ಜನರಿಗೆ ತ್ವರಿತ ವೈದ್ಯಕೀಯ ನೆರವು ನೀಡಲು ಸಹಾಯ ಮಾಡಲಿದೆ. ಪೂವರ್ಾಂಚಲ್ ಎಕ್ಸ್ಪ್ರೆಸ್ ವೇ, ಬುಂದೇಲ್ಖಂಡ್ ಎಕ್ಸ್ಪ್ರೆಸ್ ವೇ, ಗಂಗಾ ಎಕ್ಸ್ಪ್ರೆಸ್ ವೇ ಮತ್ತು ಗೋರಖ್ಪುರ್ ಎಕ್ಸ್ಪ್ರೆಸ್ ವೇ ನಿರ್ಮಾಣದ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುವ ನಾಲ್ಕು ಎಕ್ಸ್ಪ್ರೆಸ್ ಹೆದ್ದಾರಿಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ. ಈ ನೋಡಲ್ ಅಧಿಕಾರಿಗಳು ಕೆಲಸವನ್ನು ಪಾರದರ್ಶಕ ರೀತಿಯಲ್ಲಿ ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದರು. ಗೋರಖ್ಪುರ ಕೈಗಾರಿಕಾ ಕಾರಿಡಾರ್ ನಿಮರ್ಿಸಬೇಕು, ಈ ಎಲ್ಲಾ ಯೋಜನೆಗಳ ಕೆಲಸವನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಅವರು ತಾಕೀತು ಮಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 