ಅಧಿಕ ಮಾಸದ ಬಾಗಿನ : ಆಸಕ್ತ ದಂಪತಿಗಳಿಗೆ ಪ್ರಸಾದ
Adhika month: Prasad for interested couples
ಲೋಕದರ್ಶನ ವರದಿ
ಕೊಪ್ಪಳ 02: ಇಲ್ಲಿನ ಗವಿಶ್ರೀ ನಗರದಲ್ಲಿರುವ ಪ್ರಖ್ಯಾತ ಶ್ರೀ ಸಹಸ್ರಾಂಜನೇಯ ದೇವಸ್ಥಾನದ ವತಿಯಿಂದ ಅಧಿಕ ಮಾಸದ ಪ್ರಯುಕ್ತ ಬಾಗಿನ ಕೊಡುವ ಪದ್ಧತಿಯಂತೆ 33 ದಂಪತಿಗಳಿಗೆ ಶ್ರೀ ಸಹಸ್ರಾಂಜನೇಯ ಗುರುವಿನ ಪ್ರೇರಣೆಯಿಂದ ಈ ಅಧಿಕ ಮಾಸದ ಕೊನೆಯ ಶನಿವಾರ ಜೂನ್ 13 ರಂದು ಬೆಳಿಗ್ಗೆ 9 ಗಂಟೆಗೆ ಜರುಗುವ ವಿಶೇಷ ಪೂಜೆಯಲ್ಲಿ ಬಾಗಿನ ಕೊಡಲಾಗುವದು ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.
ತಮ್ಮ ಮನೆಯಲ್ಲಿ ಶ್ರೀ ಆಂಜನೇಯ ಪ್ರತಿಮೆಯನ್ನು ಪೂಜಿಸಲು ಇಚ್ಚಿಸುವಂಥ 33 ದಂಪತಿಗಳಿಗೆ ಆಮಂತ್ರಣ ಬಾಗಿನ ಕೊಡುವ ಪದ್ಧತಿಯಂತೆ ಈ ಬಾರಿ ಅಜ್ಜನ ಸನ್ನಿಧಿಯಿಂದ ಪ್ರತಿಮೆಯನ್ನು ಪೂಜಿಸಲು ಅವರಿಗೆ ಆಶೀರ್ವಾದ ರೂಪದಲ್ಲಿ ಉಡುಗೊರೆಯಾಗಿ ಕೊಟ್ಟು ಹಾರೈಸಲಾಗುವದು. ಸದರಿ ಆಸಕ್ತ ದಂಪತಿಗಳು ಈ ಕೆಳಕಂಡ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಇಲ್ಲವೇ ಖುದ್ದಾಗಿ ಭೇಟಿಯಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು, ಕಡ್ಡಾಯವಾಗಿ ಅಂದು ಅವರು ಆಗಮಿಸಬೇಕು ಹಾಗೂ ಹನುಮನ ವಿಗ್ರಹ ಪೂಜೆ ಮಾಡುವ ಕುಟುಂಬಗಳು ಮಾತ್ರ ಹೆಸರು ನೊಂದಾಯಿಸಿಕೊಳ್ಳಬೇಕು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 