ಜಿಲ್ಲಾಡಳಿತದಿಂದ ಆಯೋಜಿಸಿದ್ದ ಆದ್ಯ ಜಗದ್ಗುರು ಶಂಕರಾಚಾರ್ಯ ಜಯಂತಿ

 ಜಿಲ್ಲಾಡಳಿತದಿಂದ ಆಯೋಜಿಸಿದ್ದ ಆದ್ಯ ಜಗದ್ಗುರು ಶಂಕರಾಚಾರ್ಯ ಜಯಂತಿ  Adhya Jagadguru Shankaracharya Jayanti organized by the district administration

ಲೋಕದರ್ಶನ ವರದಿ 

ಧಾರವಾಡ 22: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಿನ್ನೆ (ಏ.21) ಸಂಜೆ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆದ್ಯ ಜಗದ್ಗುರು ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಶಾರದಾ ಶಂಕರ ರಮಣ ಅದ್ವೈತ ಮಠದ ಪರಮಪೂಜ್ಯ ಶಿವಾನಂದ ಭಾರತಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಎಡಿಸಿ ಅವರಾದ ಗೀತಾ ಸಿ.ಡಿ. ಅವರು ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಸಂಸ್ಕೃತ ಮಹಾವಿದ್ಯಾಲಯದ ಸಹ ಉಪನ್ಯಾಸಕ ವಿದ್ವಾನ್ ಸೂರ್ಯನಾರಾಯಣ ಭಟ್, ಅವರು ಶಂಕರಾಚಾರ್ಯರ ಕುರಿತು ವಿಶೇಷ ಉಪನ್ಯಾಸ ನೀಡಿದರು.  

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು. ಬ್ರಾಹ್ಮಣ ಸಮಾಜದ ಅಧ್ಯಕ್ಷ ಆರ್‌.ಡಿ. ಕಲುಕರ್ಣಿ, ಶಂಕರ ಕುಲಕರ್ಣಿ ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.