ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆಧ್ಯತೆ-ಕಟಕಧೋಂಡ
Adhyaya-Katakadhonda for all-round development of the field
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆಧ್ಯತೆ-ಕಟಕಧೋಂಡ
ಚಡಚಣ 03: ಪಟ್ಟಣವನ್ನು ಮಾದರಿಯನ್ನಾಗಿಸುವದರ ಜೋತೆಗೆ ಕ್ಷೇತ್ರದ ಸರ್ವಾಂಗೀಣ ಅಭೀವೃದ್ಧಿಗೆ ಪ್ರಥಮ ಆದ್ಯತೆ ನೀಡುವೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.
ಪಟ್ಟಣದ ಹೊರ ವಲಯದಲ್ಲಿ ಚಡಚಣ- ಉಮದಿ ರಸ್ತೆ ಡಾಂಬರೀಕರಣ ಹಾಗೂ ಚಡಚಣದಿಂದ ಶಿರಾಡೋಣದ ವರೆಗಿನ ರಸ್ತೆ ಸುಧಾರಣೆ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.ಚಡಚಣದಿಂದ ಉಮದಿವರೆಗಿನ ರಸ್ತೆ ದುರಸ್ತಿ 5 ಕೋಟಿ ಹಾಗೂ ಚಡಚಣ-ಶಿರಾಡೋಣವರೆಗೆ ಸುಮಾರು 4 ಕೋಟಿ ವೆಚ್ಚದಲ್ಲಿ ರಸ್ತೆ ಸುದಾರಣೆ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ಮಾರ್ಚ ಅಂತ್ಯದವರೆಗೆ ಕಾಮಗಾರಿಗಳು ಮುಕ್ತಾಯಗೊಳ್ಳಲಿವೆ. ಇದಲ್ಲದೆ ಸುಮಾರು 4 ಕೋಟಿ ವೆಚ್ಚದಲ್ಲಿ ಚಡಚಣ-ಶಿರಾಡೋಣ ರಸ್ತೆ ಸುದಾರಣಾ ಕಾಮಗಾರಿಯನ್ನು ಕೈಕೊಳ್ಳಗಾಗುತ್ತಿದೆ ಎಂದ ಅವರು,. ಪಟ್ಟಣದಲ್ಲಿ ಮಿನಿ ವಿದಾನಸೌದ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿ ಕೈಗೊಳ್ಳಲಾಗುವದು,
ಬಸ್ ಡಿಪೋ, ಅಗ್ನಿಶಾಮಕ ಠಾಣೆ ಪ್ರಾರಂಭಿಸಲು ಕ್ರಮ ಕೈಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಚಡಚಣ ಮಂಡಲ ಅಧ್ಯಕ್ಷ ಆರಿ್ಡ.ಹಕ್ಕೆ ಮುಖಂಢರಾದ,ಬಾಬುಗೌಡ ಪಾಟೀಲ, ರವಿದಾಸ ಜಾಧವ, ಪರಮಾನಂದ ಕೋಳಿ, ದ್ಯಾವಪ್ಪ ಪಾಟೀಲ,ರಫೀಕ ಮಕಾನದಾರ, ಸಂಗಪ್ಪ ಭಂಡರಕವಟೆ, ಡಾ.ವಿ.ಎಸ್.ಪತ್ತಾರ, ಪ,ಪಂ ಮುಖ್ಯಾಧಿಕಾರಿ ಪೂಜಾರಿ,ಸದಸ್ಯ ಪ್ರಕಾಶಗೌಡ ಪಾಟೀಲ,ಪಟ್ಟಣ ಪಂಚಾಯ್ತಿ ಸದಸ್ಯರು, ಲೋಕೊಪಯೋಗಿ ಇಲಾಖೆ ಅಧಿಕಾರಿಗಳು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 