ಎಂಐಎ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಕೋರ್ಟ್ ಗೆ ಹಾಜರು
ಮಂಗಳೂರು, ಜನವರಿ 23,ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣದ ಆರೋಪಿ ಆದಿತ್ಯ ರಾವ್ ನನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು.ಆದಿತ್ಯ ರಾವ್ ಅವರ ವಿರುದ್ಧ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಸ್ಫೋಟಕ ಇಟ್ಟಿದ್ದಟ್ಟ ಗುರುತರ ಆರೋಪ ಹೊರಿಸಲಾಗಿದೆ. ಬುಧವಾರ ಬೆಳಿಗ್ಗೆ ಅವರು ಬೆಂಗಳೂರು ಪೊಲೀಸರ ಮುಂದೆ ಶರಣಾದರು, ನಂತರ ಅವರನ್ನು ತಂಡವು ಮಂಗಳೂರಿಗೆ ಕರೆತರಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಪಿ ಎಸ್ ಹರ್ಷ ಸುದ್ದಿಗಾರರ ಜೊತೆ ಮಾತನಾಡಿ,' ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಸಾಧನ ಇರಿಸಿದ್ದ ಆರೋಪಿಯನ್ನು ತನಿಖಾ ತಂಡ ಬಂಧಿಸಿದೆ. ಅವರನ್ನು ಮೊದಲ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಿದರು. ಎಲ್ಲಾ ಸಾಕ್ಯ, ಆಯಾಮಗಳಿಂದಲೂ ನಾವು ಆರೋಪಿ ತನಿಖೆ ಮಾಡುತ್ತೇವೆ ಬೆಂಗಳೂರು ನ್ಯಾಯಾಲಯವು ನಮಗೆ ಕಾಲವಕಾಶ ನೀಡಿದೆ ಮತ್ತು ನಾವು ಅವರನ್ನು ಆರನೇ ಜೆಎಂಎಫ್ಸಿ ಮುಂದೆ ಹಾಜರುಪಡಿಸುತ್ತೇವೆ. ಯಾವುದೇ ಹೊಸ ಸಾಕ್ಷಿ, ಪುರಾವೆ ದೊರಕಿದರೆ ನಂತರ ತಿಳಿಸುವುದಾಗಿಯೂ ಹೇಳಿದರು. ಕೆಲವು ಕಾನೂನು ಅನುಸರಿಸಬೇಕಾದ ಕಾರಣ ಅವರನ್ನು ಪ್ರಶ್ನಿಸುವ ಅವಕಾಶ ಸದ್ಯಕ್ಕೆ ಇಲ್ಲ ಎಂದು ಹೇಳಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 