ಬಹುಕೋಟಿ ವಂಚನೆ ಆರೋಪ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ದಾಳಿ
Adityaraja Capital raided for alleged multi-crore fraud
ಲೋಕದರ್ಶನ ವರದಿ
ಬೆಳಗಾವಿ 04: ಬೆಳಗಾವಿಯಲ್ಲಿ ಬಹುಕೋಟಿ ವಂಚನೆ ಆರೋಪದ ಹಿನ್ನಲೆಯಲ್ಲಿ ಶಿವಂ ಅಸೆಟ್ಸಿಯೆಟ್ ಸಂಸ್ಥೆಯ ಮೇಲೆ ನಡೆದ ದಾಳಿಯು ಮಾಸುವ ಮುನ್ನವೇ ಹೆಚ್ಚಿನ ಬಡ್ಡಿ ನೀಡುವ ಆಸೆ ತೋರಿಸಿ ಹಣ ಸಂಗ್ರಹಸುತ್ತಿದ್ದ ಮತ್ತೊಂದು ಕಂಪನಿ ಮೇಲೆ ಬೆಳಗಾವಿ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಗುರುವಾರ ದಾಳಿ ನಡೆದಿದೆ.
ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ರೂ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಶಿವಂ ಅಸೋಸಿಯೇಟ್ನ ಮಾಲಿಕ ಶಿವಾನಂದ ನೀಲಣ್ಣವರ್ ಮಾದರಿಯಲ್ಲೇ ಮತ್ತೊಂದು ವಂಚನೆ ಪ್ರಕರಣ ಹೊರಬಂದಿದೆ. ನೆರೆಯ ಮಹಾರಾಷ್ಟ್ರ ಮೂಲದ ಬಲರಾಮ್ ಮಾನೆ ಎಂಬುವರ ಒಡೆತನಕ್ಕೆ ಸೇರಿದ ಆದಿತ್ಯರಾಜ ಕ್ಯಾಪಿಟಲ್ ಪ್ರೈ ಲಿ. ಕಂಪನಿ ಇದಾಗಿದ್ದು, ಈ ಕಂಪನಿಯು ಬಹುಕೋಟಿ ರೂಪಾಯಿ ಹಣ ಠೇವಣಿ ಸಂಗ್ರಹದ ಆರೋಪದ ಹಿನ್ನಲೆಯಲ್ಲಿ ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ ಅವರ ನೇತೃತ್ವದಲ್ಲಿ ಸಹಕಾರ ಇಲಾಖೆ ಹಾಗೂ ಪೊಲೀಸ ಇಲಾಖೆಗಳು ಈ ದಾಳಿ ನಡೆಸಿವೆ. ದಾಳಿ ವೇಳೆ ಸಂಸ್ಥೆಯ ವೆಬ್ ಸೈಟ್ ಶೆಡ್ ಡೌನ್ ಮಾಡಲಾಗಿದೆ.
ಆದಿತ್ಯರಾಜ ಕ್ಯಾಪಿಟಲ್ ಪ್ರೈ ಲಿ. ಕಂಪನಿಯು ಹೆಚ್ಚಿನ ಬಡ್ಡಿ ನೀಡುವ ಆಮೀಷವೊಡ್ಡಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಠೇವಣಿ ಸಂಗ್ರಹ ಮಾಡಿರುವದು ಬೆಳಕಿಗೆ ಬಂದಿದೆ. ಕಂಪನಿಯ ಮೇಲೆ ಎಸಿ ಶ್ರವಣ್ ನಾಯಕ್ ನೇತೃತ್ವದಲ್ಲಿ ಸಹಕಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿ ಭಾಗ್ಯನಗರದ ಐದನೇ ಕ್ರಾಸ್ನಲ್ಲಿ ಇರುವ ಆದಿತ್ಯರಾಜ್ಯ ಕ್ಯಾಪಿಟಲ್ ಪ್ರಾವೆಟ್ ಲಿಮಿಟೆಡ್ ಮೇಲೆ ದಾಳಿ ನಡೆಸಿದ್ದಾರೆ.
ಸಂಸ್ಥೆಯ ಮಾಲೀಕ ಮಾಹಾರಾಷ್ಟ್ರ ಮೂಲದ ಬಾಲರಾಜ್ ಮಾನೆ ಈತ ಪ್ರತಿ ತಿಂಗಳಿಗೆ ಶೇಕಡಾ 5ರಷ್ಟು ಬಡ್ಡಿ ನೀಡುವ ಆಮೀಷವೊಡ್ಡಿರುವ ಆರೋಪ ಇವರ ಮೇಲೆ ಇದೆ. ಇವರ ಸಂಸ್ಥೆ ಆರ್ಬಿಐ ಸೇರಿ ಯಾವುದೇ ಸಂಸ್ಥೆಯಿಂದ ಅನುಮತಿ ಪಡೆದಿಲ್ಲ. ಜನರಿಂದ ಈಗಾಗಲೇ ಕೋಟ್ಯಾಂತರ ರೂಪಾಯಿ ಸಂಗ್ರಹ ಮಾಡಾಲಾಗಿದೆ. ಹೂಡಿಕೆ ಸಂಗ್ರಹ ಹೆಚ್ಚಿಸಲು ಹಲವು ಪ್ರಚಾರ ಕಾರ್ಯಕ್ರಮ ಮಾಡಿ, ವೆಬ್ ಸೈಟ್ ಮೂಲಕ ಹೂಡಿಕೆಗೆ ಜನರನ್ನು ಆಕರ್ಷಿಸಲಾಗಿತ್ತು. ಸಧ್ಯ ದಾಳಿ ವೇಳೆ ಸಂಸ್ಥೆಯ ವೆಬ್ ಸೈಟ್ ಶೆಡ್ ಡೌನ್ ಮಾಡಲಾಗಿದೆ. ಆದರೂ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 