ಅತಿಕ್ರಮಿಸಿದ ರಸ್ತೆಯನ್ನು ತೆರವುಗೊಳಿಸಿದ ಆಡಳಿತಾಧಿಕಾರಿ
Administrative officer clears encroached road
ಲೋಕದರ್ಶನ ವರದಿ
ಕಾರವಾರ 19:- ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದಲ್ಲಿರಾಷ್ಟ್ರೀಯ ಹೆದ್ದಾರಿಯಿಂದ ಸದರಿ ಐಸ್ ಫ್ಯಾಕ್ಟರಿ ರವರೆಗೆ ಅನಾಧಿಕಾಲದಿಂದ ಇದ್ದ ರಸ್ತೆಯು ಕಾಲಕಾಲಕ್ಕೆ ಸುಧಾರಣೆಗೊಂಡು ಕಾಂಕ್ರೀಟ್ ರಸ್ತೆಯಾಗಿ ಮಾರ್ಾಡಾಗಿದ್ದು, ಆದರೆ ಇತ್ತಿಚಿಗೆ ಏಕಾಏಕಿ ಚೆಂಡಿಯಾ ಗ್ರಾಮದ ರುಕ್ಕಾಂಗದ ನಾಯ್ಕ ಇವರು ಸದರಿ ರಸ್ತೆಗೆ ಅಡ್ಡವಾಗಿ ಒಂದು ತಡೆಗೋಡೆಯನ್ನು ನಿರ್ಮಿಸಿ, ರಸ್ತೆಯಲ್ಲಿ ಬಂದು ಹೋಗುವ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಾಡಿರುತ್ತಾರೆ.
ಈ ಕುರಿತಂತೆ ಚೆಂಡಿಯಾ ಗ್ರಾಮದ ಗ್ರಾಮಸ್ಥರು ನೀಡಿದ ಅರ್ಜಿ, ಭೂದಾಖಲೆಗಳ ಸಹಾಯಕ ನಿರ್ದೇಶಕರು ಕಾರವಾರ ಅವರ ಪತ್ರ, ಉಪ ತಹಶೀಲಾರ ಬಾಡರವರ ವರದಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯ ಕಾನೂನು ಸಲಹೆಗಾರರ ಸಲಹೆಯಂತೆ, ಚೆಂಡಿಯಾ ಗ್ರಾಮ ಪಂಚಾಯತ್ನ ಆಡಳಿತಾಧಿಕಾರಿ ಪ್ರಶಾಂತ್ ಎಚ್.ಎಸ್. ಅವರ ನೇತೃತ್ವದಲ್ಲಿ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಸಹಕಾರದೊಂದಿಗೆ ರಸ್ತೆಗೆ ಅಡ್ಡವಾಗಿ ಕಟ್ಟಿರುವ ಸದರಿ ತಡೆಗೋಡೆಯನ್ನು ಶುಕ್ರವಾರ ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 