ಜಗಜ್ಯೋತಿ ಬಸವೇಶ್ವರರ ತತ್ವ,ಸಿದ್ಧಾಂತ ಅಳವಡಿಸಿಕೊಳ್ಳಿ: ಶಾಸಕ ಪಾಟೀಲ
Adopt the principles and principles of Jagajyoti Basaveshwara: MLA Patil
ನೇಸರಗಿ 31: ನಾವು ಜೀವನದಲ್ಲಿ ಸಹಸ್ರ ವರ್ಷಗಳ ಹಿಂದೆ ತಮ್ಮ ತತ್ವ, ನೀತಿ, ರೀತಿ, ಧರ್ಮ ಹಾಗೂ ಅವುಗಳ ಆಚರಣೆ ಬಗ್ಗೆ ಅಣ್ಣ ಜಗಜ್ಯೋತಿ ಬಸವಣ್ಣನವರು ಹಾಕಿಕೊಟ್ಟ ಹಾದಿಯಲ್ಲಿ ನಾವು ನೀವೆಲ್ಲರೂ ಸಮಾಜಮುಖಿಯಾಗಿ ನಾವು, ನೀವೆಲ್ಲರೂ ಸಹಬಾಳ್ವೆಯಿಂದ ನಡೆಯೋಣ ಹಾಗೂ ಮಹಾನ್ ಪುರುಷ ಅಣ್ಣ ಬಸವಣ್ಣ ಅವರ ಹಾಕಿಕೊಟ್ಟ ಹಾದಿಯಲ್ಲಿ ಮುನ್ನಡೆಯೋಣ ಎಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು. ಅವರು ಸಮೀಪದ ನಾಗನೂರ ಗ್ರಾಮದಲ್ಲಿ ಬುಧವಾರದಂದು ಅಣ್ಣ ಜಗಜ್ಯೋತಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿ ಮಾತನಾಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ನಾಗನೂರು - ಬೆಳಗಾವಿ ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಮಾತನಾಡಿ ಬಸವೇಶ್ವರರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಮುನ್ನಡೆಯೋಣ ಎಂದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ರೋಹಿಣಿ ಪಾಟೀಲ, ಮುಖಂಡರಾದ ಸಿದ್ದಣ್ಣ ಸುಂಕದ, ಚನ್ನಬಸಪ್ಪ ತಲ್ಲೂರ, ಮೂರ್ತಿ ಧಾಣಿಗಳಾದ ಸಮಾಜ ಕಲ್ಯಾಣ ನಿವೃತ್ತ ಅಧಿಕಾರಿಗಳಾದ ಸೋಮಶೇಖರ ನಾಯ್ಕರ, ಸಚಿನ ತಲ್ಲೂರ, ಬಸವರಾಜ ಉಣಕಲ,ನವೀನ ಗದಗ, ಮಹಾಬಳೇಶ್ವರ ತಿಗಡಿ,ಸುಜಾತ ತಲ್ಲೂರ ಸೇರಿದಂತೆ ಗ್ರಾಮದ ಮುಖಂಡರು, ಗ್ರಾ ಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 