ತೊಗರಿಯಲ್ಲಿ ಗೊಡ್ಡು ರೋಗದ ನಿರ್ವಹಣೆಗೆ ಸಲಹೆ
Advice for the management of gout in Togari
ಕೊಪ್ಪಳ 17 : ತೊಗರಿಯಲ್ಲಿನ ಕಂಡು ಬರುವ ಗೊಡ್ಡು ರೋಗದ ನಿರ್ವಹಣೆಗಾಗಿ ಕೃಷಿ ಇಲಾಖೆಯಿಂದ ಕೆಲವು ಸಲಹೆಗಳನ್ನು ನೀಡಲಾಗಿದೆ. ಹಾನಿಯ ಲಕ್ಷಣಗಳು: ತೊಗರಿಯಲ್ಲಿ ಗೊಡ್ಡು ರೋಗ ಬಂದ ಗಿಡಗಳು ಸಣ್ಣ ಗಾತ್ರದ, ಮೇಲ್ಬಾಗದಲ್ಲಿ ತಿಳಿ ಮತ್ತು ದಟ್ಟ ಹಳದಿ ಬಣ್ಣದ ಮೋಜಾಯಿಕ್ ತರಹದ ಮಚ್ಚೆಗಳನ್ನು ಹೊಂದಿ ಮುಟುರಿಕೊಂಡಿರುವ, ಹೆಚ್ಚಿನ ಸಂಖ್ಯೆಯ ಎಲೆಗಳನ್ನು ಹೊಂದಿ ಹೂ ಕಾಯಿಗಳಿಲ್ಲದೆ ಗೊಡ್ಡಾಗಿ ಉಳಿಯುತ್ತವೆ. ಬೆಳೆಯ ಎಳೆಯ ವಯಸ್ಸಿನಲ್ಲಿ ಈ ರೋಗ ಬಂದರೆ ಕಾಂಡವು ಉದ್ದವಾಗಿ ಬೆಳೆಯದೆ ಸಣ್ಣ ಟೊಂಗೆಗಳು ಹಾಗೂ ತಿಳಿ ಹಳದಿ ಬಣ್ಣದ ಚಿಕ್ಕ ಗಾತ್ರದ ಮುಟುರಿಕೊಂಡಿರುವ ಎಲೆಗಳ ಗುಂಪಿನಿಂದ ಕೂಡಿ ಕಂಟಿಯಂತಾಗಿ ಗೊಡ್ಡು ಆಗುವುದು. ಈ ರೋಗವು ಶೇ. 30ರಷ್ಟು ಹಾನಿ ಮಾಡುತ್ತದೆ.
ರೋಗದ ನಿರ್ವಹಣೆ: ತೊಗರಿಯಲ್ಲಿ ಗೊಡ್ಡು ರೋಗ ಬಂದ ಗಿಡಗಳನ್ನು ಕಿತ್ತು ನಾಶಮಾಡಬೇಕು. ನುಸಿ ನಾಶಕಗಳಾದ ಡಿಕೋಫಾಲ್ 18.5 ಇ.ಸಿ. 2.5 ಮಿ.ಲೀ. ಅಥವಾ ನೀರಿನಲ್ಲಿ ಕರಗುವ ಗಂಧಕ 2.5 ಗ್ರಾಂ ಅಥವಾ ಇಥಿಯಾನ್ 50 ಇ.ಸಿ. 2 ಮಿ.ಲೀ. ಅಥವಾ ಫೆನಾಜ್ಕ್ವಿನ್ 10 ಇ.ಸಿ. 2.00 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿ ರೈತ ಸಂಪರ್ಕ ಕೇಂದ್ರ ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿ ಇವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 