ಕೃಷಿ ಪತ್ತಿನ ಸಹಕಾರ ಸಂಘದ ಸಭೆ
Agricultural Credit Cooperative Society Meeting
ಕಂಪ್ಲಿ 18: ಕೆಸಿಸಿ ಮತ್ತು ಬಿಡಿಪಿ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿ, ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕ ಮತ್ತು ಸಂಘದ ಹಾಲಿ ನಿರ್ದೇಶಕ ಪಿ.ಮೂಕಯ್ಯಸ್ವಾಮಿ ಹೇಳಿದರು.
ತಾಲೂಕಿನ ಸಣಾಪುರ ಗ್ರಾಮದ ನಾರಾಯಣಸ್ವಾಮಿ ಕ್ಯಾಂಪ್ ಬಳಿಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಕೆ.ವೆಂಕಟರಾಮರಾಜು ಅಧ್ಯಕ್ಷತೆಯಲ್ಲಿ ಗುರುವಾರ ಆಯೋಜಿಸಿದ್ದ 7ನೇ ವಾರ್ಷಿಕ ಮಹಾಜನ ಸಭೆ ಉದ್ಘಾಟಿಸಿ ಮಾತನಾಡಿ, ಸಹಕಾರ ಸಂಘ ಸ್ಥಾಪಿಸಿ, ಈಗ ಏಳನೇ ವರ್ಷಕ್ಕೆ ಕಾಲಿಟ್ಟಿದೆ. ಕೆಲವೊಂದು ಹಳೆಯ ಸಂಘಗಳು ಸಾಲದಲ್ಲಿ ಕೈತೊಳೆಯುವ ಮಧ್ಯದಲ್ಲಿ ನಮ್ಮ ಸಂಘವು ಸ್ಥಾಪನೆಗೊಂಡು ಕೆಲ ವರ್ಷದಲ್ಲೇ ಅಭಿವೃದ್ಧಿಯ ಹೆಜ್ಜೆ ಇಟ್ಟಿದೆ. ಈಗಾಗಲೇ ಸಹಕಾರ ಸಂಘದಿಂದ ರೈತರಿಗೆ ಸಮರ್ಕವಾಗಿ ಸಾಲದ ಯೋಜನೆಗಳನ್ನು ನೀಡಲಾಗುತ್ತಿದೆ. ಮುಂದಿನ ದಿನದಲ್ಲಿ ಗೋದಾಮು ನಿರ್ಮಿಸಲಾಗುವುದು ಎಂದರು.
ಮುಖ್ಯಕಾರ್ಯನಿರ್ವಾಹಕ ಎ.ಶಿವಕುಮಾರ ವಾರ್ಷಿಕ ವರದಿಯೊಂದಿಗೆ ಮಾತನಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 