ಕೃಷಿ ಪತ್ತಿನ ಸಹಕಾರ ಸಂಘದ ಸಭೆ
Agricultural Credit Cooperative Society Meeting
ಕಂಪ್ಲಿ 18: ಕೆಸಿಸಿ ಮತ್ತು ಬಿಡಿಪಿ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿ, ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕ ಮತ್ತು ಸಂಘದ ಹಾಲಿ ನಿರ್ದೇಶಕ ಪಿ.ಮೂಕಯ್ಯಸ್ವಾಮಿ ಹೇಳಿದರು.
ತಾಲೂಕಿನ ಸಣಾಪುರ ಗ್ರಾಮದ ನಾರಾಯಣಸ್ವಾಮಿ ಕ್ಯಾಂಪ್ ಬಳಿಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಕೆ.ವೆಂಕಟರಾಮರಾಜು ಅಧ್ಯಕ್ಷತೆಯಲ್ಲಿ ಗುರುವಾರ ಆಯೋಜಿಸಿದ್ದ 7ನೇ ವಾರ್ಷಿಕ ಮಹಾಜನ ಸಭೆ ಉದ್ಘಾಟಿಸಿ ಮಾತನಾಡಿ, ಸಹಕಾರ ಸಂಘ ಸ್ಥಾಪಿಸಿ, ಈಗ ಏಳನೇ ವರ್ಷಕ್ಕೆ ಕಾಲಿಟ್ಟಿದೆ. ಕೆಲವೊಂದು ಹಳೆಯ ಸಂಘಗಳು ಸಾಲದಲ್ಲಿ ಕೈತೊಳೆಯುವ ಮಧ್ಯದಲ್ಲಿ ನಮ್ಮ ಸಂಘವು ಸ್ಥಾಪನೆಗೊಂಡು ಕೆಲ ವರ್ಷದಲ್ಲೇ ಅಭಿವೃದ್ಧಿಯ ಹೆಜ್ಜೆ ಇಟ್ಟಿದೆ. ಈಗಾಗಲೇ ಸಹಕಾರ ಸಂಘದಿಂದ ರೈತರಿಗೆ ಸಮರ್ಕವಾಗಿ ಸಾಲದ ಯೋಜನೆಗಳನ್ನು ನೀಡಲಾಗುತ್ತಿದೆ. ಮುಂದಿನ ದಿನದಲ್ಲಿ ಗೋದಾಮು ನಿರ್ಮಿಸಲಾಗುವುದು ಎಂದರು.
ಮುಖ್ಯಕಾರ್ಯನಿರ್ವಾಹಕ ಎ.ಶಿವಕುಮಾರ ವಾರ್ಷಿಕ ವರದಿಯೊಂದಿಗೆ ಮಾತನಾಡಿದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 