ಬೆಳ್ಳಂಬೆಳಿಗ್ಗೆ ಕೊರೊನಾ ಜಾಗೃತಿಗೆ ಮುಂದಾದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ, ಮಾ.30, ಕಳೆದ ಕೆಲವು ದಿನಗಳಿಂದ ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಜಾಗೃತಿಗೆ ಮುಂದಾಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಇಂದು ಬೆಳ್ಳಂಬೆಳಿಗ್ಗೆ ಹಿರೇಕೆರೂರು ನಗರದತ್ತ ಬೆಳ್ಳಂಬೆಳಿಗ್ಗೆ ಪ್ರದಕ್ಷಿಣೆ ಹಾಕಿದರು. ಪುತ್ರಿ ಹಾಗೂ ನಟಿ ಸೃಷ್ಟಿ ಪಾಟೀಲ್ ಜೊತೆಗೂಡಿ ಚೌಡೇಶ್ವರಿನಗರ, ಬಸವೇಶ್ವರ ನಗರ, ಕೋಟೆ, ಹಿರೇಕೆರೂರು ಮುಖ್ಯರಸ್ತೆ ಸೇರಿದಂತೆ ಹಲವೆಡೆ ಸಂಚರಿಸಿ ಜನರಲ್ಲಿ ಸಾಮಾಜಿಕ ಅಂತರ ಹೇಗಿದೆ? ಎಂಬುದನ್ನು ಪರಿಶೀಲಿಸಿದರು. ಅಲ್ಲದೇ ಲಾಕ್ ಡೌನ್ಗೆ ಸಹಕರಿಸುವುದು ಎಲ್ಲರ ಆದ್ಯತೆ ಆಗಬೇಕು. ಸಾಮಾಜಿಕ ಅಂತರದ ಜೊತೆ ಮಾನವೀಯ ಮೌಲ್ಯವೂ ಇರಲಿ ಎಂದು ಕರೆ ನೀಡಿದರು. ರಸ್ತೆಯಲ್ಲಿ ಓಡಾಡುತ್ತಿದ್ದ ಜನರಿಗೆ ಸಾಮಾಜಿಕ ಅಂತರ ಹಾಗೂ ಕೊರೊನಾ ಮಹಾಮಾರಿ ಕುರಿತು ಜಾಗೃತಿ ಮೂಡಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 