ಬೆಳ್ಳಂಬೆಳಿಗ್ಗೆ ಕೊರೊನಾ ಜಾಗೃತಿಗೆ ಮುಂದಾದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ, ಮಾ.30, ಕಳೆದ ಕೆಲವು ದಿನಗಳಿಂದ ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಜಾಗೃತಿಗೆ ಮುಂದಾಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಇಂದು ಬೆಳ್ಳಂಬೆಳಿಗ್ಗೆ ಹಿರೇಕೆರೂರು ನಗರದತ್ತ ಬೆಳ್ಳಂಬೆಳಿಗ್ಗೆ ಪ್ರದಕ್ಷಿಣೆ ಹಾಕಿದರು. ಪುತ್ರಿ ಹಾಗೂ ನಟಿ ಸೃಷ್ಟಿ ಪಾಟೀಲ್ ಜೊತೆಗೂಡಿ ಚೌಡೇಶ್ವರಿನಗರ, ಬಸವೇಶ್ವರ ನಗರ, ಕೋಟೆ, ಹಿರೇಕೆರೂರು ಮುಖ್ಯರಸ್ತೆ ಸೇರಿದಂತೆ ಹಲವೆಡೆ ಸಂಚರಿಸಿ ಜನರಲ್ಲಿ ಸಾಮಾಜಿಕ ಅಂತರ ಹೇಗಿದೆ? ಎಂಬುದನ್ನು ಪರಿಶೀಲಿಸಿದರು. ಅಲ್ಲದೇ ಲಾಕ್ ಡೌನ್ಗೆ ಸಹಕರಿಸುವುದು ಎಲ್ಲರ ಆದ್ಯತೆ ಆಗಬೇಕು. ಸಾಮಾಜಿಕ ಅಂತರದ ಜೊತೆ ಮಾನವೀಯ ಮೌಲ್ಯವೂ ಇರಲಿ ಎಂದು ಕರೆ ನೀಡಿದರು. ರಸ್ತೆಯಲ್ಲಿ ಓಡಾಡುತ್ತಿದ್ದ ಜನರಿಗೆ ಸಾಮಾಜಿಕ ಅಂತರ ಹಾಗೂ ಕೊರೊನಾ ಮಹಾಮಾರಿ ಕುರಿತು ಜಾಗೃತಿ ಮೂಡಿಸಿದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 