ಅಹ್ಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಸಾವಿನ ಸಂಖ್ಯೆ 274ಕ್ಕೆ ಏರಿಕೆ
Ahmedabad Air India plane crash death toll rises to 274
ಅಹ್ಮದಾಬಾದ್ 14: ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಸಾವಿನ ಸಂಖ್ಯೆ 274ಕ್ಕೆ ಏರಿಕೆಯಾಗಿದ್ದು, ಹಾಸ್ಚೆಲ್ ನಲ್ಲಿದ್ದ ವಿದ್ಯಾರ್ಥಿಗಳ ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಇನ್ನು ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 274ಕ್ಕೆ ಏರಿಕೆಯಾಗಿದ್ದು, ಈ ಪೈಕಿ 241 ಮಂದಿ ವಿಮಾನದಲ್ಲಿದ್ದವರಾಗಿದ್ದರೆ, ಬಾಕಿ 33 ಮಂದಿ ಹೊರಗಿನವರಾಗಿದ್ದಾರೆ. ಈ ಪೈಕಿ ಹಾಸ್ಟೆಲ್ ವಿದ್ಯಾರ್ಥಿಗಳು, 10 ವೈದ್ಯರು ಮತ್ತು ಹಾಸ್ಟೆಲ್ ಅವರಣದಲ್ಲಿದ್ದವರು ಎಂದು ಹೇಳಲಾಗಿದೆ. ಅಂತೆಯೇ ಈ ದುರಂತಲ್ಲಿ ಗಾಯಗೊಂಡಿದ್ದ 24 ಮಂದಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುಜರಾತ್ನ ಅಹಮದಾಬಾದ್ನಿಂದ ಇಂಗ್ಲೆಂಡ್ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿತು. ವಿಮಾನದಲ್ಲಿ 10 ಸಿಬ್ಬಂದಿ, ಇಬ್ಬರು ಪೈಲಟ್ ಗಳು ಸೇರಿದಂತೆ 242 ಜನರು ಈ ವಿಮಾನದಲ್ಲಿದ್ದರು. ಈ ಪೈಕಿ 241 ಮಂದಿ ಸಾವನ್ನಪ್ಪಿದ್ದಾರೆ.
ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಈ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಇದ್ದ ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿ ಸ್ಫೋಟವಾಗಿತ್ತು.
ಈ ವೇಳೆ ಕೇವಲ ವಿಮಾನದೊಳಗಿದ್ದ ಪ್ರಯಾಣಿಕರು ಮಾತ್ರವಲ್ಲದೇ ಹಾಸ್ಟೆಲ್ ನೊಳಗೆ ಆಗಷ್ಟೇ ಊಟಕ್ಕೆ ಕುಳಿತಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಕೂಡ ಸ್ಫೋಟದ ತೀವ್ರತೆಯಲ್ಲಿ ಸುಟ್ಟು ಕರಕಲಾದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 