ಜಿಲ್ಲೆಯ ಜನತೆಗೆ ಮರಳು ಪೂರೈಸುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ
ಲೋಕದರ್ಶನವರದಿ
ರಾಣೇಬೆನ್ನೂರು ಜೂ.27: ನಗರದ ಮಿನಿ ವಿಧಾನಸೌಧದ ಎದುರುಗಡೆ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಬುಧವಾರ ಜಿಲ್ಲೆಯ ಜನತೆಗೆ ಮರಳು ಪೂರೈಸುವವರೆಗೂ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.
ಆಹೋರಾತ್ರಿ ಧರಣಿ ನೇತೃತ್ವ ವಹಿಸಿದ್ದ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಜಿಲ್ಲೆಯಾಧ್ಯಂತ ಬಡವರು, ಮಧ್ಯಮ ವರ್ಗದವರು, ರೈತರು, ಕೂಲಿ ಕಾಮರ್ಿಕರು ಒಂದು ಶೌಚಾಲಯ ಕಟ್ಟಿಕೊಳ್ಳಲು ಮರಳು ಸಿಗದಂತಾಗಿದೆ.
ಆಶ್ರಯ ಮನೆಗಳು ಮಂಜೂರಾಗಿದ್ದರೂ ಮರಳು ಸಿಗದ ಕಾರಣ ಮುಂದಿನ ಹಂತ ತಲುಪಿಲ್ಲ. ಜನಪ್ರತಿನಿಧಿಗಳು ಗಮನ ಹರಿಸಿ ಸಾರ್ವಜನಿಕರಿಗೆ ಸಮರ್ಪಕವಾಗಿ ಮರಳು ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮಂಜು ಓಲೇಕಾರ, ಕುಮಾರ ತಳವಾರ, ನಿಂಗಪ್ಪ ಬಣಕಾರ, ಶಂಕ್ರಪ್ಪ ಚಿಗರಿ, ಕಂಚಪ್ಪ ಕುರುಬರ, ಅಡಿವೆಪ್ಪ ಹಳೇಮನಿ, ಮಲ್ಲನಗೌಡ ಆರ್.ಎಚ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 