ಪ್ಲಾಸ್ಟಿಕ ಮುಕ್ತ ಭಾರತ ಹಾಗೂ ಸ್ವಚ್ಛ ಭಾರತ ಅಭಿಯಾನಕ್ಕೆ ಐಹೊಳೆ ಕರೆ
ರಾಯಬಾಗ 04: ರಾಷ್ಟ್ರಾದ್ಯಾಂತ ಮಹಾತ್ಮ ಗಾಂಧೀಜಿ ಯವರ 150ನೇ ಜನ್ಮ ದಿನವನ್ನು ಪ್ಲಾಸ್ಟಿಕ್ ಮುಕ್ತ ಭಾರತ ಮತ್ತು ಸ್ವಚ್ಛ ಭಾರತ ಅಭಿಯಾನದೊಂದಿಗೆ ವಿಶಿಷ್ಠವಾಗಿ ಆಚರಿಸಲಾಗುತ್ತಿದೆ, ಈ ಅಭಿಯಾನ ಯಶಸ್ವಿಗೊಳಿಸಲು ದೇಶದ ಪ್ರತಿಯೊಬ್ಬ ಪ್ರಜೆ ಕೈಜೋಡಿಸಬೇಕೆಂದು ಶಾಸಕ ಡಿ.ಎಮ್.ಐಹೊಳೆ ಕರೆ ನೀಡಿದರು.
ಬುಧವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಸಸಿ ನೇಡುವುದರ ಮೂಲಕ ಮಹಾತ್ಮ ಗಾಂಧೀಜಿಯವರ 150ನೇ ಮತ್ತು ಲಾಲಬಹದ್ದೂರ ಶಾಸ್ತ್ರಿ ಅವರ 115ನೇ ಜಯಂತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಜಲ ಮತ್ತು ಪರಿಸರ ಸಂರಕ್ಷಣೆ, ಶುಚ್ಚಿತ್ವ, ಯೋಗದ ಮಹತ್ವ ಮತ್ತು ಪ್ಲಾಸ್ಟಿಕ್ ಬಳಕೆ ತಡೆಯುವುದರ ಕುರಿತು ಅರಿವನ್ನು ಮೂಡಿಸಿ, ಅವರಲ್ಲಿ ನಾಗರೀಕ ಪ್ರಜ್ಞೆಯನ್ನು ಬೆಳೆಸಬೇಕೆಂದರು.
ತಾ.ಪಂ.ಅಧ್ಯಕ್ಷೆ ಸುಜಾತಾ ಪಾಟೀಲ ಮಾತನಾಡಿ, ಶಿಕ್ಷಕರು ಮಕ್ಕಳಲ್ಲಿ ಗಾಂಧೀಜಿಯವರ ಆದರ್ಶ ಜೀವನ ತತ್ವಗಳನ್ನು ಬೋಧಿಸಿ, ಸಮಾಜದಲ್ಲಿ ಶಾಂತಿ, ಸಹಬಾಳ್ವೆಯಿಂದ ಬದುಕಲು ಮಾರ್ಗದರ್ಶ ನೀಡಬೇಕು. ಇಂದು ದೇಶಾದ್ಯಾಂತ ಪ್ಲಾಸ್ಟಿಕ್ ಮುಕ್ತ ಭಾರತವನ್ನಾಗಿ ಮಾಡಲು ಅಭಿಯಾನ ಕೈಗೊಂಡಿರುವುದು ಸ್ವಾಗತಾರ್ಹವಾಗಿದ್ದು, ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ನಿಂದ ಪರಿಸರ ಮತ್ತು ಜನರ ಆರೋಗ್ಯದ ಮೇಲೆ ಆಗುವ ಹಾನಿ ಬಗ್ಗೆ ಮನವರಿಕೆ ಮಾಡಿಸಬೇಕೆಂದರು.
ತಹಶೀಲ್ದಾರ ಡಿ.ಎಚ್.ಕೋಮರ, ತಾ.ಪಂ.ಇಒ ಸುದೀಪ ಚೌಗಲಾ, ಬಿಇಒ ಎಚ್.ಎ.ಭಜಂತ್ರಿ, ದೈಹಿಕ ಪರೀವಿಕ್ಷಕ ಡಿ.ಎಸ್.ಡಿಗ್ರಜ, ಸಮನ್ವಯಾಧಿಕಾರಿ ಬಿ.ಎಮ್.ಮಾಳಿ, ಅಣ್ಣಾಸಾಬ ಖೆಮಲಾಪೂರೆ, ಸದಾಶಿವ ಘೋರ್ಪಡೆ, ಶಿವಾನಂದ ಹುಲಗಬಾಳಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 