ಸಾಂಬ್ರಾಕ್ಕೆ ಬಂದಿಳಿಯಿತು ಏರ್ಬಸ್
ಬೆಳಗಾವಿ : ಇಲ್ಲಿನ ಸಾಂಬ್ರಾ ವಿಮಾನ ನಿಲ್ಧಾಣದ ಅಭಿವೃದ್ದಿ ಸೇರಿದಂತೆ ರನ್ವೇ ಅಗಲೀಕರಣ ಮಾಡಿದ ನಂತರ ಮೊದಲ ಬಾರಿಗೆ 140 ಪ್ರಯಾಣಿಕರನ್ನು ಹೊತ್ತು ಸಾಗುವ ಸಾಮಥ್ರ್ಯದ ಏರ್ಬಸ್ (ವಿಮಾನ)ವು ಶುಕ್ರವಾರ ಬೆಳಿಗ್ಗೆ ಸಾಂಬ್ರಾ ವಿಮಾನ ನಿಲ್ಧಾನದಲ್ಲಿ ಭೂಸ್ಪರ್ಷ ಮಾಡಿತು.
ಶುಕ್ರವಾರ ದಿನದ ಬೆಳಿಗ್ಗೆ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ ಏರ್ಬಸ್ನ್ನು ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಅವರು ಸ್ವಾಗತಿಸುವ ಮೂಲಕ ವಿಮಾನವನ್ನು ಬರಮಾಡಿಕೊಂಡರು. 140 ಸೀಟುಗಳುಳ್ಳ ಸಾಮಥ್ರ್ಯದ ಏರ್ಬಸ್ನಲ್ಲಿ 110 ಜನ ಪ್ರಯಾಣಿಕರಿದ್ದರು. ಈ ವಿಮಾನವು ಒಂದು ವಾರದ ಏಳು ದಿನವೂ ಬೆಳಗಾವಿಯಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಬೆಳಗಾವಿಗೆ ಏರ್ಬಸ್ ಹಾರಾಟ ನಡೆಸಲಿದೆ. ಇಂದರಿಂದ ಬೆಳಗಾವಿಯ ವ್ಯಾಪ್ತಿಯ ಪ್ರಯಾಣಿಕರು ಹುಬ್ಬಳ್ಳಿಗೆ ಹೋಗಿ ವಿಮಾನ ಹತ್ತಿ ಸಾಗುವದು ತಪ್ಪಿದಂತಾಗಿದೆ.
ಶುಕ್ರವಾರ ಬೆಳಿಗ್ಗೆ 8 ಘಂಟೆಗೆ ಮೊದಲ ಬಾರಿಗೆ ಏರ್ಬಸ್ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಭೂಸ್ಪರ್ಷ ಮಾಡುತ್ತಿದ್ದಂತೆಯೇ ಸಂಸದ ಪ್ರಕಾಶ ಹುಕ್ಕೇರಿ ಸೇರಿದಂತೆ ಏರ್ ಇಂಡಿಯಾ ಅಧಿಕಾರಿಗಳು ಕೇಕ್ ಕತ್ತರಿಸುವ ಮೂಲಕ ನೂತನ ವಿಮಾನ ಸೇವೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ವ್ಯವಸ್ಥಾಪಕ ರಾಜೇಶ ಮೌರ್ಯ, ನಗರ ಪೋಲೀಸ್ ಆಯುಕ್ತ ಡಿ.ಸಿ ರಾಜಪ್ಪ, ಡಿಸಿಪಿ ಸೀಮಾ ಲಾಟ್ಕರ್ ಸೇರಿದಂತೆ ಚೇಂಬರ್ ಆಫ್ ಕಾಮರ್ಸ ಅಧ್ಯಕ್ಷ ಉಮೇಶ ಶಮರ್ಾ, ಬಸವರಾಜ ಜವಳಿ, ಅಧಿಕಾರಿಗಳು ಹಾಗೂ ಮುಖಂಡರು
ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 