ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅಜಿತ್ ಅಗರ್ಕರ್ ಪೈಪೋಟಿ
ಮುಂಬೈ, ಜ ೨೪ : ಒಂದು ಕಾಲದಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಪ್ರಜ್ವಲಿಸಿದ್ದ ಮಾಜಿ ಪೇಸರ್ ಅಜಿತ್ ಅಗರ್ಕರ್ ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.
ಶುಕ್ರವಾರ (ಜನವರಿ ೨೪) ಅರ್ಜಿಸಲ್ಲಿಕೆಗೆ ಅಂತಿಮ ದಿನವಾಗಿತ್ತು ಕೊನೆಗಳಿಗೆಯಲ್ಲಿ ಅರ್ಗಕರ್ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಸೃಷ್ಟಿಯಾಗಿದೆ.
ಈವರೆಗೆ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದವರ ಪೈಕಿ ಅಗರ್ಕರ್ ಪ್ರಸಿದ್ಧ ಕ್ರಿಕೆಟಿಗರಾಗಿದ್ದು, ಅಧ್ಯಕ್ಷರಾಗುವ ಸಾಧ್ಯತೆಗಳು ಹೆಚ್ಚು. ಮುಂಬೈ ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅಗರ್ಕರ್, ಸೆಲೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿರುವುದನ್ನು ದೃಢ ಪಡಿಸಿದ್ದಾರೆ.
ಭಾರತ ಪರವಾಗಿ ೨೬ ಟೆಸ್ಟ್, ೧೯೧ ಏಕದಿನ ಮತ್ತು ಮೂರು ಟಿ -೨೦ ಪಂದ್ಯ ಆಡಿರುವ ಅನುಭವ ಹೊಂದಿದ್ದಾರೆ. ಎಲ್ಲಾ ನಮೂನೆಯ ಕ್ರಿಕೆಟ್ ಸೇರಿ ಒಟ್ಟು ೩೪೯ ವಿಕೆಟ್ ಗಳು ಅಗರ್ಕರ್ ಅವರ ಖಾತೆಯಲ್ಲಿವೆ ಎಕದಿನ ಪಂದ್ಯಗಳಲ್ಲಿ ೨೮೮ ವಿಕೆಟ್ ಪಡೆದ ಮೂರನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಗರ್ಕರ್ ತಮ್ಮ ಆಟದ ಸಮಯದಲ್ಲಿ ಅತಿ ವೇಗವಾಗಿ ೫೦ ಏಕದಿನ ವಿಕೆಟ್ ಗಳಿಸಿದ ದಾಖಲೆ ಕೂಡ ಹೊಂದಿದ್ದಾರೆ. ಅವರು ೨೩ ಎಕದಿನ ಪಂದ್ಯಗಳಲ್ಲಿ ೫೦ ವಿಕೆಟ್ ಪಡೆದಿದ್ದಾರೆ. ನಂತರ ಅಗರ್ಕರ್ ಶ್ರೀಲಂಕಾದ ಬೌಲರ್ ಮೆಂಡಿಸ್ (೧೯ ಪಂದ್ಯಗಳು) ದಾಖಲೆಯನ್ನು ಮುರಿದಿದ್ದಾರೆ.
ಸೆಲೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಗಣ್ಯರೆಂದರೆ
ಅಜಿತ್ ಅಗರ್ಕರ್ (ಮುಂಬೈ), ಚೇತನ್ ಶರ್ಮಾ (ಹರಿಯಾಣ), ನಯನ್ ಮೊಂಗಿಯಾ (ಬರೋಡಾ), ಲಕ್ಷ್ಮಣ ಶಿವರಾಮಕೃಷ್ಣನ್ (ತಮಿಳುನಾಡು), ರಾಜೇಶ್ ಚೌಹಾನ್ (ಮಧ್ಯಪ್ರದೇಶ), ಅಮೆ ಖುರೇಷಿಯಾ (ಮಧ್ಯಪ್ರದೇಶ), ಗಾಯೇಂದ್ರ ಪಾಂಡೆ (ಯುಪಿ) ಸೇರಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 