ಅಜ್ಮೀರ್ ಅಲಿ ನಿಧನ : ಇಂದು ಅಂತ್ಯಕ್ರಿಯೆ
Ajmer Ali Death: Funeral today
ಅಜ್ಮೀರ್ ಅಲಿ ನಿಧನ : ಇಂದು ಅಂತ್ಯಕ್ರಿಯೆ
ಕೊಪ್ಪಳ 05 : ರಾಜ್ಯ ಕೆಪಿಸಿಸಿ ಸಂಯೋಜಕ ಡಾ.ಕೆ.ಎಂ. ಸೈಯದ್ ಅವರ ಅಳಿಯ,ಡಾ.ಎ,ಪಿ,ಜಿ, ಅಬ್ದುಲ್ ಕಲಾಂ ಕೋ ಆಪರೇಟಿವ್ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಅಜ್ಮೀರ್ ಅಲಿ (45) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ ತಾಯಿ, ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ, ನಾಲ್ವರು ಸಹೋದರಿಯರು, ಓರ್ವ ಸಹೋದರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ದಿ, 6-ರ ಬುದುವಾರ ರಂದು ಮಧ್ಯಾಹ್ನ 1 ಗಂಟೆಗೆ ಕೊಪ್ಪಳ ತಾಲೂಕಿನ ಹಳೇ ಬಂಡಿ ಹರ್ಲಾಪುರ ಗ್ರಾಮದ ಮುಸ್ಲಿಂ ಖಬರಸ್ಥಾನದಲ್ಲಿ ಮುಸ್ಲಿಂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ಜರುಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.ಸುದ್ದಿ ತಿಳಿದ ತಕ್ಷಣ ಕೊಪ್ಪಳ ಜಿಲ್ಲೆಯ ವಿವಿಧ ಸಂಘಟನೆಗಳು ಸಮಾಜದ ಸಂಘಟನೆಗಳು ರಾಜಕಾರಣಿಗಳು ತೀವ್ರ ಸಂತಾಪ ವ್ಯಕ್ತಪಡಿಸಿ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ ಮತ್ತು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ದಯಪಾಲಿಸಲೆಂದು ಆ ಸೃಷ್ಟಿಕರ್ತ ಅಲ್ಲಾಹನಲ್ಲಿ ಪ್ರಾರ್ಥಿಸಿದ್ದಾರೆ,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 