“ಲಕ್ಷ್ಮಿ ಬಾಂಬ್” ಚಿತ್ರದ ಅಭಿನಯ ವಿಶಿಷ್ಠ: ಅಕ್ಷಯ್ ಕುಮಾರ್
Photo Credit: Bollygrad Studioz
ಮುಂಬೈ, ಜೂನ್ 30: 'ಲಕ್ಷ್ಮಿ ಬಾಂಬ್' ಚಿತ್ರದಲ್ಲಿ ಕೆಲಸ ಮಾಡುವ ಮೂಲಕ ತಮಗೆ ಹೊಸ ಅನುಭವ ಸಿಕ್ಕಿದೆ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.ರಾಘವ್ ಲಾರೆನ್ಸ್ ನಿರ್ದೇಶನದ 'ಲಕ್ಷ್ಮಿ ಬಾಂಬ್' ಚಿತ್ರದಲ್ಲಿ ಅಕ್ಷಯ್ ಕುಮಾರ್ ಮಂಗಳಮುಖಿ ಪಾತ್ರದಲ್ಲಿ ನಟಿಸಲಿದ್ದಾರೆ. ಕಿಯಾರಾ ಅಡ್ವಾಣಿ 'ಲಕ್ಷ್ಮಿ ಬಾಂಬ್' ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 'ಲಕ್ಷ್ಮಿ ಬಾಂಬ್' ಆರಂಭದಲ್ಲಿ ಮೇ 22 ರಂದು ಬಿಡುಗಡೆಯಾಗಬೇಕಿತ್ತು. ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ, ಈ ಚಿತ್ರವು ಈಗ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ಅಕ್ಷಯ್ ಅವರು ಚಿತ್ರದಲ್ಲಿ ಕೆಲಸ ಮಾಡಿದ ಅನುಭವವನ್ನು ಹಂಚಿಕೊಂಡರು, ಚಿತ್ರದ ಎರಡು ಪೋಸ್ಟರ್ಗಳನ್ನು ಹಂಚಿಕೊಂಡಿದ್ದಾರೆ.
'ಲಕ್ಷ್ಮಿ ಬಾಂಬ್' ಪಾತ್ರದಲ್ಲಿ ಹೊಸತನ ಇತ್ತು. ಚಿತ್ರದ ಯಶಸ್ಸಿಗಾಗಿ ಬೆವರು ಹರಿಸಿದ್ದೇನೆ. ನಾನು ಹಲವಾರು ರಿಟೇಕ್ಗಳನ್ನು ಸಹ ತೆಗೆದುಕೊಂಡಿದ್ದೇನೆ. ರಾಘವ್ ಚಿತ್ರದೊಂದಿಗೆ ಹೊಸದನ್ನು ಅನುಭವಿಸಲು ಅವಕಾಶ ನೀಡಿದರು. ಅವರು ನನ್ನೊಳಗಿದ್ದ ವಿಶಿಷ್ಠ ನಟನನ್ನು ಗುರುತಿಸಿದರು. ಅದು ನನಗೆ ತಿಳಿದಿರಲಿಲ್ಲ. ಈ ಪಾತ್ರವು ನಾನು ಚಿತ್ರಿಸಿದ ಎಲ್ಲ ಪಾತ್ರಗಳಿಗಿಂತ ಭಿನ್ನವಾಗಿದೆ" ಎಂದು ಅಕ್ಷಯ್ ತಿಳಿಸಿದ್ದಾರೆ.“ಲಿಂಗ ಸಮಾನತೆಯ ಬಗ್ಗೆ ನನ್ನ ಆಲೋಚನೆಗಳನ್ನು ಬಲಪಡಿಸಲು ಈ ಚಿತ್ರ ನನಗೆ ಕಲಿಸಿದೆ. ಜೀವನದಲ್ಲಿ ನೀವು ಏನು ಬೇಕಾದರೂ ಆಗಿರಿ, ಆದರೆ ಅಜ್ಞಾನಿಯಾಗಬೇಡಿ” ಎಂದಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 