“ಲಕ್ಷ್ಮಿ ಬಾಂಬ್” ಚಿತ್ರದ ಅಭಿನಯ ವಿಶಿಷ್ಠ: ಅಕ್ಷಯ್ ಕುಮಾರ್
Photo Credit: Bollygrad Studioz
ಮುಂಬೈ, ಜೂನ್ 30: 'ಲಕ್ಷ್ಮಿ ಬಾಂಬ್' ಚಿತ್ರದಲ್ಲಿ ಕೆಲಸ ಮಾಡುವ ಮೂಲಕ ತಮಗೆ ಹೊಸ ಅನುಭವ ಸಿಕ್ಕಿದೆ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.ರಾಘವ್ ಲಾರೆನ್ಸ್ ನಿರ್ದೇಶನದ 'ಲಕ್ಷ್ಮಿ ಬಾಂಬ್' ಚಿತ್ರದಲ್ಲಿ ಅಕ್ಷಯ್ ಕುಮಾರ್ ಮಂಗಳಮುಖಿ ಪಾತ್ರದಲ್ಲಿ ನಟಿಸಲಿದ್ದಾರೆ. ಕಿಯಾರಾ ಅಡ್ವಾಣಿ 'ಲಕ್ಷ್ಮಿ ಬಾಂಬ್' ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 'ಲಕ್ಷ್ಮಿ ಬಾಂಬ್' ಆರಂಭದಲ್ಲಿ ಮೇ 22 ರಂದು ಬಿಡುಗಡೆಯಾಗಬೇಕಿತ್ತು. ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ, ಈ ಚಿತ್ರವು ಈಗ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ಅಕ್ಷಯ್ ಅವರು ಚಿತ್ರದಲ್ಲಿ ಕೆಲಸ ಮಾಡಿದ ಅನುಭವವನ್ನು ಹಂಚಿಕೊಂಡರು, ಚಿತ್ರದ ಎರಡು ಪೋಸ್ಟರ್ಗಳನ್ನು ಹಂಚಿಕೊಂಡಿದ್ದಾರೆ.
'ಲಕ್ಷ್ಮಿ ಬಾಂಬ್' ಪಾತ್ರದಲ್ಲಿ ಹೊಸತನ ಇತ್ತು. ಚಿತ್ರದ ಯಶಸ್ಸಿಗಾಗಿ ಬೆವರು ಹರಿಸಿದ್ದೇನೆ. ನಾನು ಹಲವಾರು ರಿಟೇಕ್ಗಳನ್ನು ಸಹ ತೆಗೆದುಕೊಂಡಿದ್ದೇನೆ. ರಾಘವ್ ಚಿತ್ರದೊಂದಿಗೆ ಹೊಸದನ್ನು ಅನುಭವಿಸಲು ಅವಕಾಶ ನೀಡಿದರು. ಅವರು ನನ್ನೊಳಗಿದ್ದ ವಿಶಿಷ್ಠ ನಟನನ್ನು ಗುರುತಿಸಿದರು. ಅದು ನನಗೆ ತಿಳಿದಿರಲಿಲ್ಲ. ಈ ಪಾತ್ರವು ನಾನು ಚಿತ್ರಿಸಿದ ಎಲ್ಲ ಪಾತ್ರಗಳಿಗಿಂತ ಭಿನ್ನವಾಗಿದೆ" ಎಂದು ಅಕ್ಷಯ್ ತಿಳಿಸಿದ್ದಾರೆ.“ಲಿಂಗ ಸಮಾನತೆಯ ಬಗ್ಗೆ ನನ್ನ ಆಲೋಚನೆಗಳನ್ನು ಬಲಪಡಿಸಲು ಈ ಚಿತ್ರ ನನಗೆ ಕಲಿಸಿದೆ. ಜೀವನದಲ್ಲಿ ನೀವು ಏನು ಬೇಕಾದರೂ ಆಗಿರಿ, ಆದರೆ ಅಜ್ಞಾನಿಯಾಗಬೇಡಿ” ಎಂದಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 