ಮುಂಬೈ ಪೊಲೀಸರಿಗೆ ೨ ಕೋಟಿ ದೇಣಿಗೆ ಪ್ರಕಟಿಸಿ ‘ಉದಾರತೆ’ ಮೆರೆದ ಅಕ್ಷಯ್ ಕುಮಾರ್
ಮುಂಬೈ, ಏ ೨೮, ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತೊಮ್ಮೆ ತಮ್ಮ ಉದಾರತೆ ಪ್ರದರ್ಶಿಸಿದ್ದಾರೆ. ಕೊರೊನಾ ಮಹಾಮಾರಿ ವಿರುದ್ದ ಹೋರಾಟದಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಮುಂಬೈ ಪೊಲೀಸ್ ಪ್ರತಿಷ್ಠಾನಕ್ಕೆ ೨ ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಪ್ರಕಟಿಸಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿರುವ ಮುಂಬೈ ಪೊಲೀಸ್ ಆಯುಕ್ತ ಪರಮ್ ವೀರ್ ಸಿಂಗ್, ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಅಕ್ಷಯ್ ಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಕೊರೊನಾ ಸೋಂಕಿನಿಂದ ಮೃತಪಟ್ಟ ಹೆಡ್ ಕಾನಿಸ್ಟೇಬಲ್ ಗಳಾದ ಚಂದ್ರಕಾಂತ್ ಪೆಂಡೂರ್ಕರ್, ಹಾಗೂ ಸಂದೀಪ್ ಸರ್ವೆ ಅವರಿಗೆ ಅಕ್ಷಯ್ ಟ್ವೀಟ್ ನಲ್ಲಿ ನಮನಸಲ್ಲಿಸಿದ್ದಾರೆ ಮಹಾಮಾರಿ ವಿರುದ್ದ ಹೋರಾಟದಲ್ಲಿ ಪೊಲೀಸರು ಮಾಡುತ್ತಿರುವ ಸೇವೆಗೆ ಸಲಾಂ ಎಂದು ಹೇಳಿದ್ದಾರೆ. ಪೊಲೀಸರಿಂದಾಗಿ ನಾವು ಇನ್ನೂ ಸುರಕ್ಷಿತವಾಗಿದ್ದೇವೆ. ಮುಂಬೈ ಪೊಲೀಸ್ ಫೌಂಡೇಶನ್ ಗೆ ಉದಾರವಾಗಿ ದೇಣಿಗೆ ನೀಡುವಂತೆ ತಮ್ಮ ಅಭಿಮಾನಿಗಳಿಗೆ ಅಕ್ಷಯ್ ಕುಮಾರ್ ಮನವಿಮಾಡಿದ್ದಾರೆ.ಈ ಹಿಂದೆಯೂ ಅಕ್ಷಯ್ ಕುಮಾರ್ ಪ್ರಧಾನ ಮಂತ್ರಿ ಕೇರ್ಸ್ ನಿಧಿಗೆ ೨೫ ಕೋಟಿ, ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ೩ ಕೋಟಿ ದೇಣಿಗೆ ಪ್ರಕಟಿಸಿದ್ದರು. ಈಗ ಮುಂಬೈ ಪೊಲೀಸರಿಗೆ ೨ ಕೋಟಿ ದೇಣಿಗೆ ಪ್ರಕಟಿಸಿ ಸೂಪರ್ ಸ್ಟಾರ್ ಅನಿಸಿಕೊಂಡಿದ್ದಾರೆ. ಅಕ್ಷಯ್ ಅವರ ಉದಾರತೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 