ಆಳಂದ ದರ್ಗಾ: ಶಿವಲಿಂಗ ಪೂಜೆಗೆ ಅನುಮತಿ
Aland Dargah: Permission granted for Shivalinga worship
ಕಳೆದ ಕೆಲವು ವರ್ಷಗಳಿಂದ ಆಳಂದ ದರ್ಗಾ ಆವರಣದಲ್ಲಿರುವ ಶಿವಲಿಂಗಕ್ಕೆ ಮಹಾ ಶಿವರಾತ್ರಿಯಂದು ಪೂಜೆ ಸಲ್ಲಿಸಲು ಹೈಕೋರ್ಟ್
ಸೀ"ುತ ಸಂಖ್ಯೆಯ ಭಕ್ತರಿಗೆ ಮತ್ತು ನಿರ್ದಿಷ್ಟ ಸಮಯದಲ್ಲಿ ಅನುಮತಿ ನೀಡುತ್ತಾ ಬಂದಿದೆ. ಈ ವರ್ಷವೂ ಫೆಬ್ರವರಿ 15ರಂದು ಶಿವರಾತ್ರಿ ಇರುವುದರಿಂದ, ಸುಪ್ರೀಂ ಕೋರ್ಟ್ನ ಈ ನಿರ್ಧಾರವು ಭಕ್ತರಿಗೆ ಪೂಜೆ ನಡೆಸಲು ಇದ್ದ ಕಾನೂನು ಅಡ್ಡಿಗಳನ್ನು ದೂರ ಮಾಡಿದೆ.
ನ್ಯಾಯಾಲಯದ ನಿರ್ದೇಶನದಂತೆ ಮುಸ್ಲಿಂ ಸಮುದಾಯವು ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಬಹುದಾಗಿದ್ದು, ನಂತರ ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ
"ಂದೂ ಭಕ್ತರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಏತನ್ಮಧ್ಯೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ದರ್ಗಾ ಸುತ್ತಮುತ್ತ ಶನಿವಾರ ಸಂಜೆ 6ರಿಂದ ಭಾನುವಾರ ಸಂಜೆ 6ರವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದ್ದು. ಅನುಮತಿ ಪಡೆದವರ ಹೊರತು ಇತರರಿಗೆ ಆವರಣದಲ್ಲಿ ಪ್ರವೇಶ"ಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಲಾಡ್ಲೆ ಮಶಾಕ್ ದರ್ಗಾ 14ನೇ ಶತಮಾನದಲ್ಲಿ ಬದುಕಿದ್ದ ಸೂಫಿ ಸಂತ ಲಾಡ್ಲೆ ಮಶಾಕ್ ಅವರ ಹೆಸರಿನಲ್ಲಿ ಪ್ರಸಿದ್ಧವಾಗಿದೆ. ಇದೇ ಆವರಣದಲ್ಲಿ 15ನೇ ಶತಮಾನದಲ್ಲಿ ಬದುಕಿದ್ದ "ಂದೂ ಸಂತ ರಾಘವ ಚೈತನ್ಯರ ಸಮಾಧಿಯೂ ಇದೆ. ಸಮಾಧಿಯ ಮೇಲೆ ಸ್ಥಾಪಿಸಲಾದ ಶಿವಲಿಂಗವು 'ರಾಘವಚೈತನ್ಯಶಿವಲಿಂಗ'ಎಂದು ಜನಪ್ರಿಯವಾಗಿದೆ. 13 ಜನಕ್ಕೆ ಹೈಕೋರ್ಟ್
ಅನುಮತಿ ಕಲಬುರಗಿ ಅಳಂದದ "ವಾದಿತ ಲಾಡ್ಲೆಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಹೈಕೋರ್ಟ್ ಮತ್ತೆ 13 ಜನಕ್ಕೆ ಅನುಮತಿ ನೀಡಿದೆ. ಈ ಮೊದಲು ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ
"ರೇಮಠ್ ಜತೆಗೆ ಇಂದಿನ ಅರ್ಜಿಯಲ್ಲಿ ಹೆಸರಿದ್ದ 14 ಜನರ ಪೈಕಿ, 13 ಜನರಿಗೆ ಅವಕಾಶ ಕಲ್ಪಿಸಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 