ಆಲಿನಾ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
Alina selected for state level in Urdu speech competition
ಮಹಾಲಿಂಗಪುರ 02: ಪಟ್ಟಣದ ಉರ್ದು ಶಾಲೆಯ ವಿದ್ಯಾರ್ಥಿನಿ ಕುಮಾರಿ ಆಲಿನಾ ಬೂದಿಹಾಳ ಜಿಲ್ಲಾ ಮಟ್ಟದ 2024-25 ನೇ ಸಾಲಿನಪ್ರತಿಭಾ ಕಾರಂಜಿ ಉರ್ದು ಭಾಷಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಉತ್ತಮ ಸ್ಪರ್ಧೆ ನೀಡಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.
ನವೆಂಬರ್ 30 ರಂದು ಬಾಗಲಕೋಟ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಕಾರ್ಯಕ್ರಮ ಜರುಗಿತು. ಕುಮಾರಿ ಅಲಿನಾ ದಾರೂಲ್ ಉಲೂಮ್ ಮುಹಮ್ಮದೀಯ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ಈ ಸಾಧನೆಗೈದ ವಿದ್ಯಾರ್ಥಿನಿಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ನಜೀರ್ ಅತ್ತಾರ, ಮೌಲಾನಾ ಝಕ್ರಿಯಾಸಾಹಬ ಅನ್ಸಾರಿ, ಮೌಲಾನಾ ಇಲಿಯಾಸ ಮಕಾನದಾರ, ಶಾಲಾ ಖಜಾಂಚಿ ಡಾ. ಜಬ್ಬಾರ್ ಯಕ್ಸಂಬಿ, ದಾವಲಸಾಬ ನಗಾರ್ಚಿ, ಮೇಹಬೂಬ ಜೀರಗಾಳ, ಹಾರೂನ್ ಶಿಲೇದಾರ, ಮೌಲಾಸಾಬ ಮೋಮಿನ್, ಪಾಲಕರಾದ ಹುಸೇನಸಾಬ ಬೂದಿಹಾಳ ಮತ್ತು ಧರ್ಮ ಪತ್ನಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಅಲ್ಲದೆ ಸಿಬ್ಬಂದಿಗಳು ಉಪಸ್ಥಿತರಿದ್ದು, ರಾಜ್ಯ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡಲಿ ಎಂದು ಶಾಲು ಹೊದಿಸಿ ಗೌರವ ಸನ್ಮಾನ ನೀಡಿ ಶುಭ ಹಾರೈಸಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 