ಹಿಂದೂಗಳು ಎಲ್ಲರೂ ಒಗ್ಗಟ್ಟಾಗಬೇಕಿದೆ : ಈಶ್ವರಸಾ ಮೆಹರವಾಡೆ
All Hindus need to unite: Ishwarasa Meharwade
ಗದಗ 19 : ಪ್ರತಿಯೊಬ್ವ ಹಿಂದೂಗಳು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸುವ ಮೂಲಕ ನಾವೇಲ್ಲರೂ ಒಂದಾಗಬೇಕು ಎಂದು ಹಿರಿಯ ಉದ್ಯಮಿ ಈಶ್ವರಸಾ ಮೆಹರವಾಡೆ ಅವರು ಹೇಳಿದರು. ಅವರು ಗದಗ-ಬೆಟಗೇರಿ ಅವಳಿ ನಗರದ 31 ನೇ ವಾರ್ಡಿನ ಜೋಡ ಮಾರುತಿ ದೇವಸ್ಥಾನದ ಎದುರಿಗೆ ಇರುವ ಕಿಲ್ಲಾ ಓಣಿಯ ಎಸ್ಎಸ್ಕೆ ಸಮಾಜ ಬಾಂಧವರು ಹಮ್ಮಿಕೊಂಡ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಲ್ಲಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ಅಖಂಡ ಹಿಂದೂ ಸಮಾಜ ನಿರ್ಮಾಣಕ್ಕಾಗಿ ಛತ್ರಪತಿ ಶಿವಾಜಿ ಮಹಾರಾಜರು ಸಾಕಷ್ಟು ಹೋರಾಟ ಮಾಡಿದ್ದಾರೆ. ಅವರ ಕನಸನ್ನು ನಾವೇಲ್ಲರೂ ನನಸು ಮಾಡಬೇಕಿದೆ. ನಾವೇಲ್ಲ ಹಿಂದೂಗಳು ಒಗ್ಗಟ್ಟಾಗದಿದ್ದರೆ ಮುಂದಿನ ದಿನಗಳಲ್ಲಿ ನಮ್ಮೆಲ್ಲರಿಗೂ ಕಷ್ಟದ ದಿನಗಳು ಬರಲಿವೆ ಎಂದು ಹೇಳಿದ ಅವರು ಎಸ್.ಎಸ್.ಕೆ ಸಮಾಜ ಬಾಂಧವರಿಂದ ಶಿವಾಜಿ ಜಯಂತಿ ನಿಮಿತ್ಯ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಸ್ಟೀಲ್ ಬಾಟಲ್ಗಳನ್ನು ನೀಡಿರುವುದು ಶ್ಲಾಘನೀಯವಾಗಿದೆ. ಜೊತೆಗೆ ಮಕ್ಕಳಿಗೆ ಶಿವಾಜಿ ಮಹಾರಾಜ ಜೀವನದ ಕಥೆಗಳನ್ನು ಹೇಳಿ ಅವರನ್ನು ರಾಷ್ಟ್ರಭಕ್ತರನ್ನಾಗಿ ಮಾಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಸುಧೀರ ಕಾಟಿಗರ ಅವರು ಮಾತನಾಡಿ, ನಾವೇಲ್ಲರೂ ಒಂದಾಗಿ ಹಿಂದುತ್ವವನ್ನು ರಕ್ಷಣೆ ಮಾಡಬೇಕಿದೆ. ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಿದರೆ ಮಾತ್ರ ಸಾಲದು ಇಂದಿನ ದಿನಗಳಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟಲೂ ನಾವೇಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಜೋಡ ಮಾರುತಿ ದೇವಸ್ಥಾನದ ಅರ್ಚಕ ರಂಗಪ್ಪ ಪೂಜಾರಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಠ್ಠಲ ಬಾಂಡಗೆ, ಪರಶುರಾಮ ಬದಿ, ಪದ್ಮಾನಂದ ಬೇವಿನಕಟ್ಟಿ, ರಾಮಚಂದ್ರ ಶಿದ್ಲಿಂಗ, ಪರಶುರಾಮ ಮಿಸ್ಕಿನ್, ಶಿವಾನಂದ ಪೂಜಾರಿ, ನೇಮಚಂದ ಪವಾರ, ಸಂದೀಪ ಕಬಾಡಿ, ಸುನೀಲ ಬಸವಾ, ಲಕ್ಷ್ಮಣ ದೇವಖತ್, ಮನ್ನು ದಲಬಂಜನ, ಪ್ರಕಾಶ ಕಾಟಿಗರ, ರಾಹುಲ್ ಚವ್ಹಾಣ, ರಾಜು ಮಗಜಿ, ನಾರಾಯಣ ಟಿಕಣದಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀಕಾಂತ ಬಾಕಳೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರವಿ ಚವ್ಹಾಣ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 