ಚಿಕ್ಕೋಡಿ ಉಪವಿಭಾಗದ ಎಲ್ಲ ಸೇತುವೆಗಳು ಸಂಚಾರಕ್ಕೆ ಮುಕ್ತ
ಲೋಕದರ್ಶನ ವರದಿ
ಚಿಕ್ಕೋಡಿ ಜುಲೈ 12: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಸ್ವಲ್ಪಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಿದ್ದು ಕೃಷ್ಣಾ, ವೇದಗಂಗಾ ಮತ್ತು ಧೂದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಇಳಿಕೆ ಕಂಡಿದೆ. ಹೀಗಾಗಿ ಮುಳುಗಡೆಗೊಂಡಿದ್ದ ಚಿಕ್ಕೋಡಿ ಉಪವಿಭಾಗದ ಎಲ್ಲ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೆಜ್ನಿಂದ 44,125 ಕ್ಯೂಸೆಕ್ ನೀರು ಹಾಗೂ ದೂಧಗಂಗಾ ನದಿಯಿಂದ 10,912 ಕ್ಯೂಸೆಕ್ ನೀರು ಹೀಗೆ ಒಟ್ಟು 55,037 ಕ್ಯೂಸೆಕ್ ನೀರು ರಾಜ್ಯದ ಕೃಷ್ಣಾಗೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ - 19 ಮಿ.ಮೀ ನವಜಾ - 09 ಮಿಮೀ, ಮಹಾಬಲೇಶ್ವರ - 11 ಎಂಎಂ, ವಾರಣಾ - 12 ಎಂಎಂ, ಕಾಳಮ್ಮವಾಡಿ - 30 ಎಂಎಂ, ರಾಧಾನಗರಿ - 13 ಎಂಎಂ, ಪಾಟಗಾಂವ - 38 ಎಂಎಂ ಮಳೆಯಾಗಿದ್ದು ವರದಿಯಾಗಿದೆ. ಚಿಕ್ಕೋಡಿ ಉಪವಿಭಾಗದಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ.
ದೂಧಗಂಗಾ ನದಿಗೆ ನಿಮರ್ಿಸಿರುವ ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ -ಅಕ್ಕೋಳ, ಮಲಿಕವಾಡ-ದತ್ತವಾಡ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿಮರ್ಿಸಿರುವ ಕುನ್ನೂರ-ಬಾರವಾಡ ಸೇತುವೆ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿ ನಿಮರ್ಿಸಿರುವ ಯಡೂರು-ಕಲ್ಲೋಳ ಸೇತುವೆ ಹೀಗೆ ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಕೂಡಾ ಸಂಚಾರಕ್ಕೆ ಮುಕ್ತವಾಗಿವೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 