ಚಿಕ್ಕೋಡಿ ಉಪವಿಭಾಗದ ಎಲ್ಲ ಸೇತುವೆಗಳು ಸಂಚಾರಕ್ಕೆ ಮುಕ್ತ
ಲೋಕದರ್ಶನ ವರದಿ
ಚಿಕ್ಕೋಡಿ ಜುಲೈ 12: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಸ್ವಲ್ಪಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಿದ್ದು ಕೃಷ್ಣಾ, ವೇದಗಂಗಾ ಮತ್ತು ಧೂದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಇಳಿಕೆ ಕಂಡಿದೆ. ಹೀಗಾಗಿ ಮುಳುಗಡೆಗೊಂಡಿದ್ದ ಚಿಕ್ಕೋಡಿ ಉಪವಿಭಾಗದ ಎಲ್ಲ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೆಜ್ನಿಂದ 44,125 ಕ್ಯೂಸೆಕ್ ನೀರು ಹಾಗೂ ದೂಧಗಂಗಾ ನದಿಯಿಂದ 10,912 ಕ್ಯೂಸೆಕ್ ನೀರು ಹೀಗೆ ಒಟ್ಟು 55,037 ಕ್ಯೂಸೆಕ್ ನೀರು ರಾಜ್ಯದ ಕೃಷ್ಣಾಗೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ - 19 ಮಿ.ಮೀ ನವಜಾ - 09 ಮಿಮೀ, ಮಹಾಬಲೇಶ್ವರ - 11 ಎಂಎಂ, ವಾರಣಾ - 12 ಎಂಎಂ, ಕಾಳಮ್ಮವಾಡಿ - 30 ಎಂಎಂ, ರಾಧಾನಗರಿ - 13 ಎಂಎಂ, ಪಾಟಗಾಂವ - 38 ಎಂಎಂ ಮಳೆಯಾಗಿದ್ದು ವರದಿಯಾಗಿದೆ. ಚಿಕ್ಕೋಡಿ ಉಪವಿಭಾಗದಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ.
ದೂಧಗಂಗಾ ನದಿಗೆ ನಿಮರ್ಿಸಿರುವ ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ -ಅಕ್ಕೋಳ, ಮಲಿಕವಾಡ-ದತ್ತವಾಡ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿಮರ್ಿಸಿರುವ ಕುನ್ನೂರ-ಬಾರವಾಡ ಸೇತುವೆ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿ ನಿಮರ್ಿಸಿರುವ ಯಡೂರು-ಕಲ್ಲೋಳ ಸೇತುವೆ ಹೀಗೆ ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಕೂಡಾ ಸಂಚಾರಕ್ಕೆ ಮುಕ್ತವಾಗಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 