ಸರ್ವರಲ್ಲೂ ಒಂದಿಲ್ಲೊಂದು ಕಲೆ ಇರುತ್ತದೆ
ಲೋಕದರ್ಶನ ವರದಿ
ಬೈಲಹೊಂಗಲ 22: ಸರ್ವರಲ್ಲೂ ಒಂದಿಲ್ಲೊಂದು ಕಲೆ ಇರುತ್ತದೆ. ಅದನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದಾಗ ಕಲೆಗೆ ಒಂದು ಒಂದು ಬೆಲೆ ಸಿಗುತ್ತದೆ ಎಂದು ಗದಗ ತೊಂಟದಾರ್ಯಮಠದ ಡಾ. ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು.
ತಾಲೂಕಿನ ನಾಗನೂರಿನಲ್ಲಿ ಕಾಯಕಯೋಗಿ ಡಾ.ಶಿವಬಸವ ಮಹಾಸ್ವಾಮೀಜಿ ಪುಣ್ಯಸ್ಮರಣೆ ರಜತ ಮಹೋತ್ಸವ ಹಾಗೂ ಸಾವಳಗೀಶ್ವರ ದೇವರ ನಿರಂಜನ ಪಟ್ಟಾಭಿಷೇಕ ಕಾರ್ಯದಂಗವಾಗಿ ಅಖಿಲ ಕರ್ನಾಟಕ ಸರ್ವಕಲ್ಲಾವಿದರ ಹಿತ ರಕ್ಷಣಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ ನಡೆದ ಸಾಂಸ್ಕೃತಿಕ ಸೌರಭವನ್ನು ಉದ್ಘಾಟಿಸಿ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚಾಗಿ ಹಮ್ಮಿಕೊಂಡು ಕಲಾವಿದರನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು. ಕಾರ್ಯಕ್ರಮದಲ್ಲಿ ಸುಗಮ ಸಂಗೀತ, ಜನಪದ ಗೀತೆಗಳು, ಸುಗ್ಗಿ ನೃತ್ಯ, ರೈತ ಗೀತೆ, ಜೋಗುತಿ ನೃತ್ಯ ಹಾಗೂ ಭರತನಾಟ್ಯ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆದವು.
ನಾಗನೂರ ರುದ್ರಾಕ್ಷಿ ಮಠದ ಡಾ. ಸಾವಳಗೀಶ್ವರ ಸ್ವಾಮೀಜಿ, ಜನಪದ ಕಲಾವಿದ ಶಂಕರ ಕೊತವಾಳ ಹಾಗೂ ಸರ್ವ ಕಲಾವಿದರ ಹಿತ ರಕ್ಷಣಾ ಸಂಘದ ರಾಜ್ಯಾಧ್ಯಕ್ಷ ರಮೇಶ ಪರವಿನಾಯ್ಕರ, ಬಾಬಣ್ಣ ಶಿವನಾಯ್ಕರ,ರವಿ ಶಿವನಾಯ್ಕರ ಮತ್ತಿತರರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 