ಸರ್ವರಲ್ಲೂ ಒಂದಿಲ್ಲೊಂದು ಕಲೆ ಇರುತ್ತದೆ
ಲೋಕದರ್ಶನ ವರದಿ
ಬೈಲಹೊಂಗಲ 22: ಸರ್ವರಲ್ಲೂ ಒಂದಿಲ್ಲೊಂದು ಕಲೆ ಇರುತ್ತದೆ. ಅದನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದಾಗ ಕಲೆಗೆ ಒಂದು ಒಂದು ಬೆಲೆ ಸಿಗುತ್ತದೆ ಎಂದು ಗದಗ ತೊಂಟದಾರ್ಯಮಠದ ಡಾ. ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು.
ತಾಲೂಕಿನ ನಾಗನೂರಿನಲ್ಲಿ ಕಾಯಕಯೋಗಿ ಡಾ.ಶಿವಬಸವ ಮಹಾಸ್ವಾಮೀಜಿ ಪುಣ್ಯಸ್ಮರಣೆ ರಜತ ಮಹೋತ್ಸವ ಹಾಗೂ ಸಾವಳಗೀಶ್ವರ ದೇವರ ನಿರಂಜನ ಪಟ್ಟಾಭಿಷೇಕ ಕಾರ್ಯದಂಗವಾಗಿ ಅಖಿಲ ಕರ್ನಾಟಕ ಸರ್ವಕಲ್ಲಾವಿದರ ಹಿತ ರಕ್ಷಣಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ ನಡೆದ ಸಾಂಸ್ಕೃತಿಕ ಸೌರಭವನ್ನು ಉದ್ಘಾಟಿಸಿ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚಾಗಿ ಹಮ್ಮಿಕೊಂಡು ಕಲಾವಿದರನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು. ಕಾರ್ಯಕ್ರಮದಲ್ಲಿ ಸುಗಮ ಸಂಗೀತ, ಜನಪದ ಗೀತೆಗಳು, ಸುಗ್ಗಿ ನೃತ್ಯ, ರೈತ ಗೀತೆ, ಜೋಗುತಿ ನೃತ್ಯ ಹಾಗೂ ಭರತನಾಟ್ಯ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆದವು.
ನಾಗನೂರ ರುದ್ರಾಕ್ಷಿ ಮಠದ ಡಾ. ಸಾವಳಗೀಶ್ವರ ಸ್ವಾಮೀಜಿ, ಜನಪದ ಕಲಾವಿದ ಶಂಕರ ಕೊತವಾಳ ಹಾಗೂ ಸರ್ವ ಕಲಾವಿದರ ಹಿತ ರಕ್ಷಣಾ ಸಂಘದ ರಾಜ್ಯಾಧ್ಯಕ್ಷ ರಮೇಶ ಪರವಿನಾಯ್ಕರ, ಬಾಬಣ್ಣ ಶಿವನಾಯ್ಕರ,ರವಿ ಶಿವನಾಯ್ಕರ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 