ಎಲ್ಲ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಹೊರಗೆ ಬನ್ನಿ- ನಾಗರಾಜ ಹಣಗಿ
All students should stop using mobile phones - Nagaraja Hanagi
ಲಕ್ಷ್ಮೇಶ್ವರ " 22 : ಎಲ್ಲಾ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಹೊರಗೆ ಬರಬೇಕು ಪುಸ್ತಕ ಓದುವ ಕಡೆಗೆ ಹೆಚ್ಚು ಗಮನ ಕೊಡಬೇಕು ಎಂದು ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಹಾಗೂ ಹಿರಿಯ ಪ್ರಜಾವಾಣಿ ಲಕ್ಷ್ಮೇಶ್ವರ ತಾಲೂಕು ವರದಿಗಾರರಾದ ನಾಗರಾಜ ಹಣಿಗಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರುಅವರು ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಚಟ ಬಿಡಿಸುವ ನಿಟ್ಟಿನಲ್ಲಿ ತಾಲ್ಲೂಕು ಮಕ್ಕಳ ಸಾಹಿತ್ಯ ಪರಿಷತ್ತು ತಾಲ್ಲೂಕಿನ ಎಲ್ಲ ಶಾಲೆಗಳಲ್ಲಿ ಮೊಬೈಲ್ ಬಿಡ ಪುಸ್ತಕ ಹಿಡಿ ಎಂಬ ವಿಶೇಷ ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಂದ್ರ ಗಡಾದ ಅವರು ಕಾರ್ಯಕ್ರಮ ಉದ್ಘಾಟಿಸಿದರು.ಮುಖ್ಯ ಶಿಕ್ಷಕ ಬಿ.ಎಂ. ಕುಂಬಾರ ಅಧ್ಯಕ್ಷತೆ ವಹಿಸಿದ್ದರು ತಾಲ್ಲೂಕು ಹಿರಿಯ ನಾಗರಿಕರು ಮತ್ತು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಆರ್. ಲಕ್ಕುಂಡಿಮಠ, ಡಾ.ಎಸ್.ಜಿ. ಹೂವಿನ ಸಿಆರ್ಿ ಶ್ರೀನಿವಾಸ ಮತ್ತೂರ ಹಾಗೂ 2026 ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿಗೆ ಭಾಜನರಾದ ಶಂಕರ್ ಶಿಳ್ಳಿನ ಅವರನ್ನು ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 