ಉಡುಪಿ ಜಿಲ್ಲೆಯ ಎಲ್ಲ ಗಡಿಗಳು ಸಂಪೂರ್ಣ ಬಂದ್
ಉಡುಪಿ, ಏಪ್ರಿಲ್ 11, ಉಡುಪಿ ಜಿಲ್ಲೆಯ ಎಲ್ಲ ಗಡಿಗಳನ್ನೂ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಯಾರು ಬರುವಂತಿಲ್ಲ ಮತ್ತು ಜಿಲ್ಲೆಯಿಂದ ಯಾರೊಬ್ಬರು ಹೊರಗೆ ಹೋಗುವಂತಿಲ್ಲ ಜಿಲ್ಲೆಯ ನಾಲ್ಕು ಗಡಿಗಳು ಪೂರ್ಣವಾಗಿ ಬಂದ್ ಆಗಿದ್ದು, ಉ.ಕ, ದ.ಕ, ಶಿವಮೊಗ್ಗ, ಚಿಕ್ಕಮಗಳೂರು ಗಡಿಗಳು ಇದರಲ್ಲಿ ಸೇರಿಕೊಂಡಿವೆ. ಜಿಲ್ಲೆಯೊಳಗೆ ಯಾರಿಗೂ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್, ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಲಾಕ್ ಡೌನ್ ಮುಗಿಯುವ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಹೊರ ಜಿಲ್ಲೆಗಳಲ್ಲಿರುವ ಜಿಲ್ಲೆಯ ಜನರು ಉಡುಪಿಗೆ ಬರಲು ತಯಾರಿ ನಡೆಸಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಹಾಗೆಯೇ ಉಡುಪಿಯಲ್ಲಿ ಸಿಲುಕಿರುವ ಹೊರ ಜಿಲ್ಲೆಯ ಜನರು ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಮಾಹಿತಿಯ ಕಾರಣ ಜಿಲ್ಲೆಯ ಗಡಿಗಳನ್ನು ಸೀಲ್ ಮಾಡುವ ಕಠಿಣ ಕ್ರಮ ಕೈಗೊಳ್ಳಲಾಗಿದೆ.ಸದ್ಯ ಉಡುಪಿ ಸುರಕ್ಷಿತವಾಗಿದೆ. ಹೊರ ಜಿಲ್ಲೆಯಿಂದ ಸೋಂಕು ಬರುವ ಅಪಾಯ ಬೇಡ. ಹಾಗಾಗಿ ಗಡಿ ಸೀಲ್ ಡೌನ್ ಮಾಡಿ ಯಾರು ಒಳಕ್ಕೆ ಬರದಂತೆ ಮತ್ತು ಹೊರ ಹೋಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ .
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 