ಲೈಂಗಿಕ ಕಿರುಕುಳ ಆರೋಪ : ಮುದ್ದುಲಕ್ಷ್ಮೀ ಖ್ಯಾತಿಯ ಕಿರುತೆರೆ ನಟ ಚರಿತ್ ಬಾಳಪ್ಪ ಬಂಧನ
Allegation of sexual harassment: TV actor Charith Balappa of Muddulakshmi fame arrested
ಬೆಂಗಳೂರು 27: ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆ ಬೆಂಗಳೂರಿನಲ್ಲಿ ಕಿರುತೆರೆ ನಟ ಚರಿತ್ ಬಾಳಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಕನ್ನಡದ ʼಮುದ್ದುಲಕ್ಷ್ಮೀʼ ಸೇರಿದಂತೆ ತೆಲುಗಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಕಿರುತೆರೆ ಲೋಕದಲ್ಲಿ ಗಮನ ಸೆಳೆದಿರುವ ಚರಿತ್ ಬಾಳಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪ, ಹಣಕ್ಕೆ ಬೇಡಿಕೆ ಆರೋಪ ಕೇಳಿಬಂದ ಹಿನ್ನೆಲೆ ಅವರನ್ನು ಆರ್ಆರ್ ನಗರ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಪ್ರೀತಿಸುವ ನಾಟಕವಾಡಿ ಪರಿಚಯವಿರುವ ಗೆಳತಿಗೆ ಚರಿತ್ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಯುವತಿ ವಾಸಿಸುತ್ತಿದ್ದ ಮನೆಗೆ ನುಗ್ಗಿ ಚರಿತ್ ಕಿರುಕುಳ ನೀಡಿದ್ದಾನೆ, ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ಕೊಡದಿದ್ದರೆ ಖಾಸಗಿ ವಿಡಿಯೋ, ಫೋಟೋಗಳನ್ನು ಹರಿಬಿಡುವ ಬೆದರಿಕೆಯನ್ನು ಚರಿತ್ ಹಾಕಿದ್ದಾನೆ ಎಂದು ದೂರಿನಲ್ಲಿ ಯುವತಿ ಹೇಳಿದ್ದಾಳೆ.
ಚರಿತ್ ಈಗಾಗಲೇ ಮದುವೆಯಾಗಿ ವಿಚ್ಚೇದನ ಪಡೆದಿದ್ದಾರೆ. ವಿಚ್ಛೇದನ ಪರಿಹಾರ ಹಣಕ್ಕೆ ನೋಟಿಸ್ ಕಳುಹಿಸಿದ್ದಕ್ಕೆ ಮಾಜಿ ಪತ್ನಿಗೆ ಚರಿತ್ ಬೆದರಿಕೆ ಹಾಕಿದ್ದರು, ಈ ಹಿನ್ನೆಲೆಯಲ್ಲಿಅವರ ವಿರುದ್ಧ ಅವರ ಮಾಜಿ ಪತ್ನಿಯೂ ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 