ಶೌಚಾಲಯ ಗೋಡೆ ತೆರವು ಆರೋಪ; ಸ್ಥಳ ಪರೀಶೀಲನೆ ನಡೆಸಿದ ಪುರಸಭೆ ಅಧಿಕಾರಿಗಳು
Allegations of toilet wall being removed; Municipal officials inspect the site
ಮುಗಳಖೋಡ 14 : ಪಟ್ಟಣದ ವಾರ್ಡ್ ನಂ 1 ಹಾಗೂ 2 ರಲ್ಲಿ ವಾಸಿಸುವ ನಿವಾಸಿಗಳು ಸರ್ಕಾರಿ ಗಾಯಾರಾಣ ಜಾಗದಲ್ಲಿ ಮಹಿಳೆಯರಿಗಾಗಿ ನಿರ್ಮಿಸಲಾದ ಬಯಲು ಶೌಚಾಲಯದ ಗೋಡೆಯನ್ನು ಕೆಲವರು ತೆರವುಗೊಳಿಸಿದ್ದಾರೆ ಎನ್ನಲಾದ ಘಟನಾಸ್ಥಳಕ್ಕೆ ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ ಪವಾಡಿಶೆಟ್ಟಿ ಹಾಗೂ ಸಿಬ್ಬಂದಿ ವರ್ಗ ಗುರುವಾರ ಸಂಜೆ 5:00ಗೆ ಘಂಟೆಗೆ ಭೇಟ್ಟಿ ನೀಡಿ ಸ್ಥಳ ಪರೀಶೀಲನೆ ಮಾಡಿದರು. ನಂತರ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು ಸಂಬಂಧಪಟ್ಟವರನ್ನು ಪುರಸಭೆಗೆ ಕರೆಯಿಸಿ ಎಲ್ಲಾ ದಾಖಲೆಗಳನ್ನು ಪರೀಶೀಲಿಸುವುದಾಗಿ ಭರವಸೆ ನೀಡಿದರು.
ಮಹಿಳೆಯರು ನೀಡಿದ ಕೆಲವು ದಾಖಲೆಗಳು , ತಡೆಗೋಡೆಯ ಭಾವಚಿತ್ರ ಹಾಗೂ ಅರ್ಜಿಗಳನ್ನು ಪರೀಶೀಲಿಸಿ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು. ನಂತರ ಮಂಗಳವಾರ ಪುರಸಭೆ ಸದಸ್ಯರು ಹಾಗೂ ಉನ್ನತಮಟ್ಟದ ಅಧಿಕಾರಿಗಳ ತುರ್ತು ಸಭೆ ಕರೆದು ಚರ್ಚಿಸುತ್ತೇನೆ ಎಂದು ಬರವಸೆ ನೀಡಿದರು. ಪುರಸಭೆ ಸದಸ್ಯ ಪರ್ಪಗೌಡ ಖೇತಗೌಡರ ಮಾತನಾಡಿ, ತೆರವುಗೊಳಿಸಿದ ತಡೆಗೋಡೆಯ ಅಕ್ಕ ಪಕ್ಕದಲ್ಲಿ ಸಾರ್ವಜನಿಕ ಪುರಾತನ ಬಾವಿ ಇಲ್ಲಿಯೇ ಇತ್ತು.
1 ಮತ್ತು 2 ನೇಯ ವಾರ್ಡಿನ ಮಹಿಳೆಯರು ಶೌಚಕ್ಕೆ ಹೋಗಲು ಮರ್ಯಾದೆಗಾಗಿ ಸನ್ 2013-14ರಲ್ಲಿ 13ನೇ ಹಣಕಾಸು ಯೋಜನೆ ಅಡಿಯಲ್ಲಿ ತಡೆಗೋಡೆ ಮತ್ತು ಸಾರ್ವಜನಿಕ ಶೌಚಾಲಯ ಅಂದು ನಿರ್ಮಿಸಲಾಗಿತ್ತು ಎಂದು ಮುಖ್ಯಾಧಿಕಾರಿಗಳಿಗೆ ಜಾಗೆಯ ಹಳೆ ಮಾಹಿತಿ ಸಮಜಾಯಿಸಿ ಹೇಳಿದರು. ಸಾರ್ವಜನಿಕರ ಮೇಲೆ ಕೆಲವರು ಇಲ್ಲದ ಸಲ್ಲದ ಆರೋಪ ಮಾಡುತ್ತಾ 1 ಮತ್ತು 2ನೆಯ ವಾರ್ಡ್ ನ ಬಡ ಸಾರ್ವಜನಿಕರನ್ನು ಹೆದರಿಸಿ , ಬೆದರಿಸಿ, ದಬ್ಬಾಳಿಕೆ ನಡೆಸಿ ಸರಕಾರಿ ಗಾಯರಾಣ ಜಾಗೆಯನ್ನು ಕಬಳಿಸಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ರಾಯಬಾಗ ತಹಸಿಲ್ದಾರ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಯರು ಪುರಸಭೆ ಸಿಬ್ಬಂದಿ ವರ್ಗ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 