ಬಿಜೆಪಿ ಜೊತೆಗೆ ಮೈತ್ರಿ : ಯಾದವ್ ಪಕ್ಷಕ್ಕೆ ಗುಡ್ ಬೈ
ಚಂಡೀಗಢ, ಅ 26: ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿ ಜೊತೆ ಅಧಿಕಾರ ಹಂಚಿಕೆ ಮಾಡಿಕೊಳ್ಳಲು ಮುಂದಾಗಿರುವ ಜನನಾಯಕ ಜನತಾ ಪಕ್ಷ ಜೆಜೆಪಿಯ ನಿರ್ಧಾರದಿಂದ ತೀವ್ರ ಬೇಸರ, ಅಸಮಾಧಾನಗೊಂಡಿರುವ ಮಾಜಿ ಯೋಧ ತೇಜ್ ಬಹಾದೂರ್ ಯಾದವ್ ಅವರು ಜೆಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ವಿರುದ್ಧ ತೇಜ್ ಸ್ಪರ್ಧೆ ಮಾಡಿ ಸೋತಿದ್ದರು. ಕೈ ಬೆರಳಿನ ಶಾಯಿ ಅಳಿಸುವ ಮುನ್ನವೇ ನಾಟಕೀಯ ಬೆಳವಣಿಗೆ ಮತ್ತು ಪಕ್ಷದ ನಿರ್ಧಾರಕ್ಕೆ ಮನನೊಂದು ಯಾದವ್ ದೂರ ಸರಿದಿದ್ದಾರೆ. ಈ ಹಿಂದೆ ಭಾರತೀಯ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ತುಣುಕು ಹಾಕಿ ದೇಶದ ಉದ್ದಗಲಕ್ಕೂ ಮಿಂಚಿನ ಸಂಚಲನಕ್ಕೆ ಮೂಡಿಸಿದ್ದರು. ಇದರ ಪರಿಣಾಮ ಯಾದವ್ ಅವರನ್ನು ಸೇವೆಯಿಂದ ವಜಾ ಮಾಡಲಾಗಿತ್ತು. ಹರಿಯಾಣ ವಿಧಾನಸಭಾ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆಯೇ ದುಷ್ಯಂತ್ ಚೌಟಾಲಾ ಅವರ ಸಮ್ಮುಖದಲ್ಲಿ ಯಾದವ್ ಅವರು ಜೆಜೆಪಿ ಸೇರಿದ್ದರು. ಹರಿಯಾಣದ ಜನತೆ ತಿರಸ್ಕರಿಸಿರುವ ಬಿಜೆಪಿ ಜೊತೆ ಕೈಜೋಡಿಸುವ ಮೂಲಕ ದುಷ್ಯಂತ್ ಚೌಟಾಲಾ ರಾಜ್ಯದ ಜನತೆಗೆ ದ್ರೋಹ ಬಗೆದಿದ್ದಾರೆ, ಮೋಸ ಮಾಡಿದ್ದಾರೆ, ವಂಚನೆ ಮಾಡಿದ್ದಾರೆ. ಈ ಮೂಲಕ ಜೆಜೆಪಿಯ ಅಸಲಿ ಬಣ್ಣ ಬಯಲಾಗಿದೆ. ಜೆಜೆಪಿ ಬೇರೆಯಲ್ಲ, ಬಿಜೆಪಿ ಬೇರೆಯಲ್ಲ, ಎರಡೂ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ಜನರು ಇದರ ವಿರುದ್ಧ ಸೆಡೆದು ನಿಲ್ಲಬೇಕು. ಈ ಅಪವಿತ್ರ ಮೈತ್ರಿಯನ್ನು ವಿರೋಧಿಸಿ ಬೀದಿಗಿಳಿದು ಹೋರಾಟ ಮಾಡಬೇಕೆಂದು ಯಾದವ್ ಒತ್ತಾಯಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 