ಪಂಚಾಂಗ ವಾಚನ ಕಾರ್ಯಕ್ರಮ ಯಶಸ್ವಿ
Almanac reading program successful
ಬಳ್ಳಾರಿ 21: ನಗರದಲ್ಲಿ ಕಲ್ಚರಲ್ ಆಕ್ಟಿವೀಟೀಸ್ ಅಸೋಸಿಯೇಷನ್ ವತಿಯಿಂದ ನಗರದದಲ್ಲಿ ಪಂಚಾಂಗ ವಾಚನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಶೀಲಾ ಬ್ರಹ್ಮಯ್ಯ ಅವರು ವೇದಿಕೆಯಲ್ಲಿದ್ದ ಗಣ್ಯರಿಗೆ ಸನ್ಮಾನಿಸಿದರು.ನಂತರ ಉಮಾಮಹೇಶ್ವರ ಪಂಚಾಂಗದ ಕರ್ತೃ ಪಂಡಿತ್ ಮಠಂ ಗುರುಪ್ರಸಾದ್ ಅವರು ಶ್ರೀ ಪರಾಭವ ನಾಮ ಸಂವತ್ಸರದ ಮಳೆ, ಬೆಳೆ, ಗೋಚಾರಾದಿ ಫಲಗಳನ್ನು ವಾಚನ ಮಾಡಿ ವಿವರಿಸಿದರು. ಕಾರ್ಯಕ್ರಮದ ಆರಂಭದಲ್ಲಿ ನೃತ್ಯ ಕಲಾವಿದ ಅಭಿಷೇಕ್ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರ ತಂಡದ ಮಕ್ಕಳಿಂದ ಮನಮೋಹಕ ನೃತ್ಯ ಪ್ರದರ್ಶನ ನಡೆಯಿತು.
ನೃತ್ಯದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯ ವಹಿಸಿದ್ದ ಕೊಕ್ಕರಚೇಡಿನ ಶ್ರೀಗುರು ಚರಣಾನಂದ ಗುರು ಸೇವಾಶ್ರಮದ ಪೂಜ್ಯ ಮಾತಾಜಿ ಶರಣಮ್ಮ ತಾಯಿ ಅವರು ಮನಶುದ್ಧಿ ಮತ್ತು ಸನ್ನಡತೆಯಿಂದ ಮುಂಬರುವ ಹೊಸ ವರ್ಷ ಎಲ್ಲರ ಜೀವನದಲ್ಲಿ ಸಂತಸ ಹಾಗೂ ಸಮೃದ್ಧಿ ತರಲೆಂದು ಶುಭಾಶಯ ಕೋರಿದರು.
ವೇದಿಕೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ, ಕಾರ್ಯನಿರ್ವಾಹಕ ಅಧಿಕಾರಿ ಸೆಲ್ವಮಣಿ, ಉಪಾಧ್ಯಕ್ಷ ಎನ್. ಪ್ರಕಾಶ್, ಛೇಂಬರ್ ಆಫ್ ಕಾಮರ್ಸ್ನ ಹಿರಿಯ ಉಪಾಧ್ಯಕ್ಷ ದೊಡ್ಡನಗೌಡ, ಖಜಾಂಚಿ ಎಂ.ಟಿ. ಮಲ್ಲೇಶಪ್ಪ, ಪ್ರಧಾನ ಕಾರ್ಯದರ್ಶಿ ವಿ. ರಾಮಚಂದ್ರ, ಜಂಟಿ ಕಾರ್ಯದರ್ಶಿ ಜಿ.ಕೆ. ರಾಮಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತಾಜಿ ಶರಣಮ್ಮ ತಾಯಿ ಅವರು ಪಂಚಾಂಗ ಕರ್ತೃ ಪಂಡಿತ್ ಮಠಂ ಗುರುಪ್ರಸಾದ್ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮವನ್ನು ಕೆ.ಬಿ. ಸಿದ್ಧಲಿಂಗಪ್ಪ ನಿರೂಪಿಸಿದರು. ಅಸಂಖ್ಯಾತ ಭಕ್ತರು ಪಂಚಾಂಗ ವಾಚನವನ್ನು ಶ್ರವಣ ಮಾಡಿ ಧನ್ಯರಾದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 