ಅಂಬೇಡ್ಕರ್ ಆದರ್ಶಗಳು ಪ್ರತಿಯೊಬ್ಬರ ಬದುಕಿಗೆ ಬೆಳಕು : ಹೊಸಕೋಟೆ ಜಗದೀಶ
Ambedkar's ideals are a light for everyone's life: Hosakote Jagadeesh
ಲೋಕದರ್ಶನ ವರದಿ
ಕಂಪ್ಲಿ 16: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ಸಮಾನತೆ, ಮೀಸಲಾತಿ, ಶಿಕ್ಷಣ, ಮತದಾನದ ಹಕ್ಕು ಸೇರಿದಂತೆ ನಾನಾ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಪ್ರತಿಯೊಬ್ಬರ ಬಾಳಿಗೆ ಬೆಳಕಾಗಿದ್ದಾರೆ ಎಂದು ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ಹೇಳಿದರು. ಪಟ್ಟಣದ 4ನೇ ವಾರ್ಡಿನ ಅಂಬೇಡ್ಕರ್ ಕಾಲೋನಿಯ ಸಣಾಪುರ-ಬೆಳಗೋಡಹಾಳ್ ರಸ್ತೆ ಮಧ್ಯದಲ್ಲಿ ಇತ್ತೀಚೆಗೆ ಲೋಕಾರೆ್ಣಗೊಂಡ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗೆ ಮಾಲಾರೆ್ಣಯೊಂದಿಗೆ ಪುಷ್ಪ ನಮನ ಸಲ್ಲಿಸಿದ ನಂತರ ಅಂಬೇಡ್ಕರ್ ಸಂಘದ ಸನ್ಮಾನ ಸ್ವೀಕರಿಸಿ ಮಾತನಾಡಿ, ಅಂಬೇಡ್ಕರ್, ಜಗಜೀವನ್ ರಾಮ್ ಅವರ ಚರಿತ್ರೆಯ ಪುಸ್ತಕಗಳನ್ನು ಮಕ್ಕಳಿಗೆ ನೀಡಬೇಕು.
ಅವರ ವಿಚಾರಧಾರೆಗಳು ಪ್ರತಿಯೊಬ್ಬರಿಗೂ ಮಾದರಿಯಾಗಿವೆ. ಬುದ್ದ, ಬಸವ, ಅಂಬೇಡ್ಕರ್ ಅವರ ತತ್ವಾದರ್ಶಗಳ ಪರಿಪಾಲನೆಯೊಂದಿಗೆ ಉತ್ತಮ ಜೀವನದ ಕಡೆಗೆ ಸಾಗೋಣ. ಜೂ.10ರಂದು ನಡೆದ ಪುತ್ಥಳಿ ಲೋಕಾರೆ್ಣಗೆ ಬರುವುದಕ್ಕೆ ಆಗಲಿಲ್ಲ. ಆದ್ದರಿಂದ ಈಗ ಮಹಾನ್ ನಾಯಕರ ಪುತ್ಥಳಿಗೆ ಭೇಟಿ ನೀಡಲಾಯಿತು ಎಂದರು. ನಂತರ ಅಂಬೇಡ್ಕರ್ ಸಂಘದಿಂದ ಹೊಸಕೋಟೆ ಜಗದೀಶಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸಂಘದ ಅಧ್ಯಕ್ಷ ರುದ್ರಮುನಿ, ಗೌರವಾಧ್ಯಕ್ಷ ಕೆ.ಹುಲುಗಪ್ಪ, ಪ್ರಧಾನ ಕಾರ್ಯದರ್ಶಿ ಟಿ.ಹೊನ್ನೂರ್ಪ, ಉಪಾಧ್ಯಕ್ಷರಾದ ವಿಜಯ, ಮಾರುತಿ, ಖಜಾಂಚಿ ಮಾರೇಶ, ಮುಖಂಡರಾದ ರಾಘವೇಂದ್ರ, ಹುಲುಗಣ್ಣ, ಕರಿಯಪ್ಪ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 