ಅಂಬೇಡ್ಕರ್ ಜಯಂತಿ ನಿಮಿತ್ಯ ಅಂಬೇಡ್ಕರ್ ಕ್ರಿಕೆಟ್ ಟೂರ್ನಿಗೆ ಚಾಲನೆ
Ambedkar Cricket Tournament launched on the occasion of Ambedkar Jayanti
ವಿಜಯಪುರ 20: ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ವಿಶೇಷ ನಾಲ್ಕು ದಿನದ ಡಾ. ಬಾಬಾಸಾಹೇಬರ ಅಂಬೇಡ್ಕರ್ ರವರ ಜಯಂತೋತ್ಸವದ ನಿಮಿತ್ಯವಾಗಿ "ಅಂಬೇಡ್ಕರ್ ಕಪ್ " ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಸಂಚಾಲಕರಾದ ಅಕ್ಷಯ್ ಕುಮಾರ್ ಅಜಮನಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಕಾಲೇಜು ಮತ್ತು ವಸತಿ ನಿಲಯ ವಿದ್ಯಾರ್ಥಿಗಳಿಗೆ ಈ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಲು ಮುಕ್ತ ಅವಕಾಶ ಇರಲಿದೆ.
ಫೈನಲ್ ವಿಜೇತ ತಂಡಕ್ಕೆ ಪ್ರಥಮ ಬಹುಮಾನ 15000 ಸಾವಿರ, ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಡುವ ತಂಡಕ್ಕೆ ದ್ವಿತೀಯ ಬಹುಮಾನ 10, 000 ಸಾವಿರ ಬಹುಮಾನ ಇರಲಿದೆ.
ಭಾಗವಹಿಸುವರು ಕಡ್ಡಾಯವಾಗಿ ನೋಂದಣಿ ಪತ್ರದಲ್ಲಿ ಕಾಲೇಜು / ವಸತಿ ನಿಲಯ ಮುಖ್ಯಸ್ಥರ ಪರವಾನಿಗೆ ಪತ್ರ ತರಬೇಕು. ನೋಂದಣಿಯನ್ನು 26/03/2025 ರ ಒಳಗಾಗಿ ಮಾಡಿಕೊಳ್ಳಬೇಕು. ಪ್ರವೇಶ ಶುಲ್ಕ 1100 ರೂ ಮಾತ್ರ ಇರಲಿದೆ.
ಪಂದ್ಯಾವಳಿಗಳು ಜಿಲ್ಲಾ ಪಂಚಾಯತಿ ಆವರಣದಲ್ಲಿ ಇರುವ ಮೈದಾನದಲ್ಲಿ ನಡೆಯಲಿದೆ. ಭಾಗಿಯಾಗುವ ಎಲ್ಲಾ ಕ್ರೀಡಾ ಪಟುಗಳಿಗೆ ಕ್ರೀಡೆಯಲ್ಲಿ ಭಾಗವಹಿಸಿದ ಪ್ರಮಾಣ ಪತ್ರ ನೀಡಲಾಗುಹುದು. ಹೆಚ್ಚಿನ ಮಾಹಿತಿಗಾಗಿ 9739396446, 8088160436, 8431626548 ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅಕ್ಷಯ್ ಕುಮಾರ್ ಅಜಮನಿ ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 