ವಿಜೃಂಭಣೆಯಿಂದ ನಡೆದ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
Ambedkar portrait procession held with great enthusiasm
ವಿಜೃಂಭಣೆಯಿಂದ ನಡೆದ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
ಕಂಪ್ಲಿ 15: ತಾಲೂಕು ಸಮೀಪದ ದೇವಸಮುದ್ರ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಮುಖಂಡ ಹೆಚ್.ಗುಂಡಪ್ಪ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ಅವರ ತತ್ವ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಡಾ.ಬಿ.ಆರ್. ಅಂಬೇಡ್ಕರ್ಅವರು ಶೋಷಣೆಯನ್ನು ಸಹಿಸಿ, ಸಮಾಜ ಪರಿವರ್ತನೆಗಾಗಿ ಜೀವನದ ಉದ್ದಕ್ಕೂ ಹೋರಾಟದ ಬದುಕು ನಡೆಸಿ ಶೋಷಿತ ಸಮಾಜಗಳಿಗೆ ಬೆಳಕಿನ ಹಣತೆಯಾಗಿದ್ದಾರೆ. ನಾವೆಲ್ಲರೂ ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಅರಿತು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂದರು. ದೇವಸಮುದ್ರ ಗ್ರಾಮದಲ್ಲಿ ಕೆಂಚಮ್ಮ ಗುಡಿಯಿಂದ ಸಹಿಪ್ರಾ ಶಾಲೆತನಕ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ನಡೆಯಿತು. ಯುವತಿಯರು ಆರತಿ ತಟ್ಟೆಗಳನ್ನು ಹಿಡಿದು ಪಾಲ್ಗೊಂಡಿದ್ದರು.
ಪ್ರಮುಖರಾದ ಕಡೆಮನಿ ಮಂಜುನಾಥ, ಎನ್.ಹೊನ್ನೂರ್ಪ, ಕುರುಬರ ಬಸವರಾಜ, ನಾಯಕರ ವೆಂಕೋಬಿ, ಎಚ್.ವೀರೇಶ, ಗ್ರಾಮ ಸಂಚಾಲಕ ಎಚ್.ರುದ್ರ್ಪ, ಎಚ್.ದುರ್ಗೇಶ, ಬಾಳಾಪುರ ಮಂಜುನಾಥ, ಎಚ್.ಪ್ರಭು ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 