ಅಂಬೇಡ್ಕರ್ ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಚಿಂತಕ
ಲೋಕದರ್ಶನ ವರದಿ
ರಾಯಬಾಗ 26: ವಿಶ್ವಕ್ಕೆ ಮಾದರಿಯಾಗಿರುವ ಭಾರತ ಸಂವಿಧಾನ ರಚಿಸಿರುವ ಡಾ.ಬಿ.ಆರ್.ಅಂಬೇಡ್ಕರ್ರವರು ಇಂದು ಜಗತ್ತಿಗೆ ಜ್ಞಾನದ ಬೆಳಕು ಎಂದು ಗುರ್ತಿಸಲ್ಪಟ್ಟಿದ್ದಾರೆ ಎಂದು ಶಿಕ್ಷಕ ಬಿ.ಎಲ್.ಘಂಟಿ(ಪಾಟೀಲ) ಹೇಳಿದರು. ಮಂಗಳವಾರ ಪಟ್ಟಣದ ತಾ.ಪಂ.ಸಭಾಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ತಾಲೂಕು ಸಮಿತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ದಿನ ಪ್ರಯುಕ್ತ ಭಾರತ ಸಂವಿಧಾನ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ರವರು ಶೋಷಿತ, ಬಡವರ, ದಿನದಲಿತರಿಗೆ ಸಂವಿಧಾನದಲ್ಲಿ ನ್ಯಾಯ ಒದಗಿಸಿಕೊಟ್ಟು, ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು.
ಪ್ರಸ್ತಾವಿಕವಾಗಿ ಮಾತನಾಡಿದ ಕ.ದ.ಸಂ.ಸಮಿತಿರಾಜ್ಯ ಸಂಘಟನಾ ಸಂಚಾಲಕ ರಾಜು ತಳವಾರ ಅವರು, ಇಂದಿನ ರಾಜಕೀಯ ಸ್ಥಿತಿಯಲ್ಲಿ ಸಂವಿಧಾನಕ್ಕೆ ಅನೇಕ ತಿದ್ದುಪಡಿ ಮಾಡುವುದರ ಮೂಲಕ ಅಂಬೇಡ್ಕರರವರು ರಚಿಸಿದ ಮೂಲ ಸಂವಿಧಾನಕ್ಕೆ ಧಕ್ಕೆ ತರುವಂತಹ ಕಾರ್ಯ ಮಾಡುತ್ತಿರುವುದನ್ನು ಖಂಡೀಸಿದರು.ಇನ್ನುವರೆಗೂ ಅಂಬೇಡ್ಕರ್ರವರ ಚಿಂತನೆ ಮತ್ತು ವಿಚಾರಗಳನ್ನು ಅರ್ಥಮಾಡಿಕೊಳ್ಳಲು ದೇಶದ ಜನರಿಗೆ ಸಾಧ್ಯವಾಗದೇ ಇರುವುದು ವಿಷಾದನೀಯವಾಗಿದೆ. ಭಾರತ ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಯುವ ಪೀಳಿಗೆ ತಿಳಿದುಕೊಳ್ಳಬೇಕಾಗಿರುವುದು ಇಂದು ಅತ್ಯಂತ ಮಹತ್ವದ್ದಾಗಿದೆ ಎಂದರು. ಬಿಇಒ ಎಚ್.ಎ.ಭಜಂತ್ರಿ ಮತ್ತು ತಾ.ಪಂ.ಇಒ ಪ್ರಕಾಶ ವಡ್ಡರ ಸಂವಿಧಾನದ ಮಹತ್ವದ ಕುರಿತು ಮಾತನಾಡಿದರು. ತಾಲೂಕು ಸಂಚಾಲಕ ಸಿದ್ದು ಕಾಂಬಳೆ ಅಧ್ಯಕ್ಷತೆಯನ್ನು ವಹಿಸಿದ್ದರು. ತಾ.ಪಂ.ಸದಸ್ಯ ನಾಮದೇವ ಕಾಂಬಳೆ, ಸಿಡಿಪಿಒ ಸಂತೋಷ ಕಾಂಬಳೆ, ಪಿಡ್ಲ್ಯುಡಿಅಧಿಕಾರಿ ಆರ್.ಕೆ.ನಿಂಗನೂರೆ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಕೆ.ಟಿ.ಕಾಂಬಳೆ ಸೇರಿದಂತೆಅನೇಕರು ಉಪಸ್ಥಿತರಿದ್ದರು. ಎಸ್.ಡಿ.ರಾಯಮಾನೆ ಸ್ವಾಗತಿಸಿ, ನಿರೂಪಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 