ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ವಿಧಾನಮಂಡಲ ಅಧಿವೇಶನದಲ್ಲಿಯೂ ಚರ್ಚೆ ನಡೆಯಬೇಕು- ಸಿದ್ದರಾಮಯ್ಯ
ಬೆಂಗಳೂರು, ಮೇ 18, ಕಾರ್ಮಿಕ ಕಾಯ್ದೆಗಳಿಗೆ ಅವಸರದಲ್ಲಿ ಮತ್ತು ಏಕಪಕ್ಷೀಯವಾಗಿ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಸರ್ಕಾರ ಕೊರೊನಾ ಹಾವಳಿಯಿಂದಾಗಿ ಕಷ್ಟದಲ್ಲಿರುವ ಕಾರ್ಮಿಕರ ಗಾಯದ ಮೇಲೆ ಬರೆ ಹಾಕಲು ನಿರ್ಧರಿಸಿದಂತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾ ಸೋಂಕಿನಿಂದಾಗಿ ನಷ್ಟದಲ್ಲಿರುವ ಉದ್ಯಮಗಳಿಗೆ ನೆರವಾಗುವುದೆಂದರೆ ಕಾರ್ಮಿಕರ ನ್ಯಾಯಬದ್ಧ ಹಕ್ಕುಗಳನ್ನು ಕಿತ್ತುಕೊಂಡು ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುವುದಲ್ಲ. ಮಾಲೀಕರದ್ದು ಮಾತ್ರವಲ್ಲ, ಕಾರ್ಮಿಕರ ಹಿತರಕ್ಷಣೆ ಕೂಡಾ ಚುನಾಯಿತ ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೊದಲು ಕಾರ್ಮಿಕ ಪ್ರತಿನಿಧಿಗಳ ಜೊತೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾತುಕತೆ ನಡೆಸಬೇಕು. ವಿಧಾನಮಂಡಲ ಅಧಿವೇಶನದಲ್ಲಿಯೂ ಚರ್ಚೆ ನಡೆಯಬೇಕು. ಈಗಿನ ಅವಸರದ ನಡೆಯ ಹಿಂದೆ ದುರುದ್ದೇಶದ ವಾಸನೆ ಹೊಡೆಯುತ್ತಿದೆ ಎಂದು ಹೇಳಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 