ಎಬಿವಿಪಿ ೭೨ನೇ ಸಂಸ್ಥಾಪನ ದಿನ, ಅಮಿತ್ ಶಾ ಅಭಿನಂದನೆ
ನವದೆಹಲಿ, ಜುಲೈ 9: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಸ್ಥಾಪನಾ ದಿನದ ಅಂಗವಾಗಿ ಹಿರಿಯ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಘಟನೆಯ ಸದಸ್ಯರನ್ನು ಅಭಿನಂದಿಸಿದ್ದಾರೆ.
ದೇಶದ ಅತಿದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ೭೨ನೇ ಸಂಸ್ಥಾಪನ ದಿನ ಆಚರಿಸಿಕೊಳ್ಳುತ್ತಿದೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆ ತನ್ನ ರಾಷ್ಟ್ರೀಯವಾದಿ ತತ್ವ ಸಿದ್ದಾಂತದೊಂದಿಗೆ ಕಳೆದ ಏಳು ದಶಕಗಳಿಂದ ರಾಷ್ಟ್ರ ಸೇವೆಯತ್ತ ಯುವ ಜನರನ್ನು ಪ್ರೇರೇಪಣೆಗೊಳಿಸುವ ಮೂಲಕ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಸ್ವಾಮಿ ವಿವೇಕಾನಂದ ಅವರ ಚಂತನೆ, ಆದರ್ಶಗಳನ್ನು ಪಾಲಿಸುತ್ತಾ, ಸಂಘಟನೆಯ ಸದಸ್ಯರು ರಾಷ್ಟ್ರ ನಿರ್ಮಾಣ ಪಥದಲ್ಲಿ ಕಾರ್ಯಪ್ರವೃತ್ತವಾಗಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 