ದೇಶವ್ಯಾಪಿ ಗಾಂಧಿ ಸಂಕಲ್ಪ ಯಾತ್ರೆಗೆ ಅಮಿತ್ ಶಾ ಚಾಲನೆ
ನವದೆಹಲಿ, ಅ 2: ಮಹಾತ್ಮಾ ಗಾಂಧಿ ಅವರ 150 ನೇ ಜನ್ಮ ವಷರ್ಾಚರಣೆ ಪ್ರಯುಕ್ತ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ದೇಶವ್ಯಾಪಿ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ನವದೆಹಲಿಯ ಶಾಲಿಮರ್ ಬಾಗ್ ನಲ್ಲಿ ಬುಧವಾರ ಬೆಳಗ್ಗೆ ಈ ದೇಶವ್ಯಾಪಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಾಂಧಿ ಅವರು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟರು ಎಂದು ಸ್ಮರಿಸಿದರು.
ಏಕಬಳಕೆಯ ಪ್ಲಾಸ್ಟಿಕ್ ಪರಿಸರಕ್ಕೆ ಮತ್ತು ಆರೋಗ್ಯಕ್ಕೆ ಮಾರಕವಾಗಿರುವ ಹಿನ್ನೆಲೆಯಲ್ಲಿ ಇಂತಹ ಪ್ಲಾಸ್ಟಿಕ್ ಬಳಸುವುದಿಲ್ಲ ಎಂದು ಪಣತೊಡುವಂತೆ ಜನರಿಗೆ ಮನವಿ ಮಾಡಿದರು. ಈ ಅಭಿಯಾನದ ಭಾಗವಾಗಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಅ 2 ರಿಂದ ಅ 31 ರವರೆಗೆ ಪ್ರತಿ ದಿನ 5 ಕಿಲೋಮೀಟರ್ ನಂತೆ 150 ಕಿಲೋಮೀಟರ್ ಪಾದಯಾತ್ರೆ ನಡೆಸಿ ಜನಜಾಗೃತಿ ಮೂಡಿಸಲಿದ್ದಾರೆ. ಗಾಂಧಿ ಜಯಂತಿ ದಿನದಿಂದ ಸದರ್ಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದವರೆಗೆ ಈ ಪಾದಯಾತ್ರೆ ಕೈಗೊಂಡು ಇಬ್ಬರು ಧೀಮಂತ ನಾಯಕರಿಗೆ ಗೌರವ ಸೂಚಿಸಲಿದ್ದಾರೆ. ಅವರ ಸ್ವದೇಶ, ಸ್ವಧರ್ಮ, ಸ್ವದೇಶಿ ಮೌಲ್ಯಗಳನ್ನು ಹಳ್ಳಿ ಹಳ್ಳಿಗೂ ಪಸರಿಸುವುದು ಈ ಆಂದೋಲನದ ಧ್ಯೇಯವಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 