ನಕ್ಸಲ್ ಪೀಡಿತ ರಾಜ್ಯಗಳ ಸಿಎಂ ಜೊತೆ ಅಮಿತ್ ಶಾ ಸಭೆ
ನವದೆಹಲಿ, ಆಗಸ್ಟ್ 26 ನಕ್ಸಲ್ ಸಮಸ್ಯೆ ನಿವಾರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಉನ್ನತಮಟ್ಟದ ಪರಿಶೀಲನಾ ಸಭೆ ನಡೆಸಲಿದ್ದಾರೆ . ಉನ್ನತ ಮೂಲಗಳ ಪ್ರಕಾರ ಸಭೆಯಲ್ಲಿ ಮಹಾರಾಷ್ಟ್ರ, ತೆಲಂಗಾಣ ಮತ್ತು ಛತ್ತೀಸ್ ಗಡದಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಿದ ಕಾರಣ ಭದ್ರತೆ ಬಿಗಿಗೊಳಿಸಲು ಮತ್ತು ನಕ್ಸಲ್ ಗುಂಪುಗಳ ಆರ್ಥಿಕ ಸ್ಥಿತಿ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು ಎನ್ನಲಾಗಿದೆ.
ಭದ್ರತಾ ಪಡೆಗಳ ಇತ್ತೀಚಿನ ಕಾರ್ಯಾಚರಣೆಗಳ ಹೊರತಾಗಿಯೂ ನಕ್ಸಲರು ಕಾರ್ಯಾಚರಣೆ ಮಾಡುವ ಸ್ಥಳಗಳು,ಪ್ರದೇಶಗಳ ಬಗ್ಗೆ ಜಿಲ್ಲಾವಾರು ಪರಿಶೀಲನೆ ನಡೆಸಲಾಗುವುದು ಎಂದು ಭದ್ರತಾ ಸಂಸ್ಥೆಯ ಮೂಲಗಳು ಇಲ್ಲಿ ತಿಳಿಸಿವೆ.
ನಕ್ಸಲ್ ಭೀತಿ ಎದುರಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವುದು ಸಭೆಯ ಒಂದು ಪ್ರಮುಖ ಅಂಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿನ ದಿನಗಳಲ್ಲಿ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್), ರಾಜ್ಯ ಪೊಲೀಸ್ ಪಡೆ ನಕ್ಸಲ್ ಪೀಡಿತ ರಾಜ್ಯಗಳಲ್ಲಿ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಸಾಕಷ್ಟು ಪ್ರಾಬಲ್ಯ ಸಾಧಿಸಿದೆ.
ಕೆಲವು ರಾಜ್ಯಗಳಲ್ಲಿ ಮಾವೋವಾದಿ ಗುಂಪಿಗೆ ಆರ್ಥಿಕ ನೆರವು ನೀಡುವುದನ್ನು ತಡೆಯಲು ರಾಷ್ಟ್ರೀಯ ತನಿಖಾ ಸಂಸ್ಥೆ ಸಹ ಕ್ರಮ ಕೈಗೊಂಡಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 