ಮಹಿಳಾ ಕೇಂದ್ರಿತ ಕವನಗಳಿಗೆ ಆಹ್ವಾನ
An invitation to women-centric poems
ವಿಜಯಪುರ 22: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 6 ರಿಂದ ಮಾರ್ಚ್ 8ರವರೆಗೆ “ಮಹಿಳಾ ಸಾಂಸ್ಕೃತಿಕ ಹಬ್ಬ-2025” ಹಮ್ಮಿಕೊಳ್ಳಲಾಗಿದೆ.
“ಮಹಿಳಾ ಸಾಂಸ್ಕೃತಿಕ ಹಬ್ಬ-2025”ದ ಅಂಗವಾಗಿ ಕವಿ-ಕವಿಯತ್ರಿಯರಿಂದ ಮಹಿಳಾ ಕೇಂದ್ರಿತ ಕವನಗಳನ್ನು ಆಹ್ವಾನಿಸಲಾಗಿದೆ. ಬಂದ ಕವನಗಳಲ್ಲಿ ಅತ್ತ್ಯುತ್ತಮ 3 ಕವನಗಳನ್ನು ಆಯ್ಕೆ ಮಾಡಿ, ರಚನೆ ಮಾಡಿದ ಕವಿಯತ್ರಿ/ಕವಿಗಳನ್ನು ಮಾರ್ಚ್ 8, 2025 ರಂದು ಓದಲು ಅವಕಾಶ ನೀಡಿ, ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಆಸಕ್ತರು ದಿ. 25-02-2025ರೊಳಗಾಗಿ ತಮ್ಮ ಕವನಗಳನ್ನು ಪ್ರೊ. ಲಕ್ಷ್ಮಿದೇವಿ ವೈ., ನಿರ್ದೇಶಕರು, ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಜ್ಞಾನಶಕ್ತಿ ಆವರಣ, ತೊರವಿ, ಕ.ರಾ.ಅ.ಮ.ವಿವಿ, ವಿಜಯಪುರ-586108, ಮೊ.ಸಂ.9902234469 ಇವರಿಗೆ ತಲುಪುವಂತೆ ಹಾಗೂ ಸಾಫ್ಟ್ ಪ್ರತಿಯನ್ನು ಜಡಿಜಛಿಣಠಥಿಛಿಚಿತಿಣತಅರಟಚಿಟ.ಛಿಠ ಗೆ ಕಳುಹಿಸಬಹುದಾಗಿದೆ. ವಿಶ್ವವಿದ್ಯಾನಿಲಯದಿಂದ ಯಾವುದೇ ರೀತಿಯ ಪ್ರಯಾಣ ಭತ್ಯೆ, ದಿನ ಭತ್ಯೆ ಮತ್ತು ಸಂಭಾವನೆಯನ್ನು ನೀಡಲಾಗುವುದಿಲ್ಲ ಎಂದು ವಿವಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಮೋ.ಸಂ. 9845442828, 9481706330, 7975560095, 8861677052.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 