ಘಟಪ್ರಭಾ: ಸಂಭ್ರಮದ ಅಂಭಾ ಭವಾನಿ ಜಾತ್ರೆ
ಲೋಕದರ್ಶನ ವರದಿ
ಘಟಪ್ರಭಾ 30: ಸ್ಥಳೀಯ ಗೊಂದಳಿ ಗಲ್ಲಿಯಲ್ಲಿರುವ ಅಂಭಾ ಭವಾನಿ ಜಾತ್ರೆಯು ಮಂಗಳವಾರದಂದು ಅತೀ ವಿಜೃಂಭಣೆಯಿಂದ ಜರುಗಿತು.
ಮುಂಜಾನೆ ಅಂಭಾ ಭವಾನಿಗೆ ರುದ್ರಾಭಿಷೇಕ, ಮಹಾ ಪೂಜೆ ಜರುಗಿತು. ನಂತರ ಶ್ರೀ ಅಂಭಾ ಭವಾನಿಯ ಭಾವ ಚಿತ್ರದ ಭವ್ಯ ಮೇರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಸ್ಥಾನ ತಲುಪಿತು. ನಂತರ ಮಹಾಪ್ರಸಾದ ಜರುಗಿತು.
ಈ ಸಂದರ್ಭದಲ್ಲಿ ಮರಾಠಾ ಗೊಂದಳಿ ಸಮಾಜದ ಹಿರಿಯರಾದ, ಬಾಳುಮಹಾರಾಜ ಬೋಸಲೆ, ಯಲಪ್ಪ ಗುರುವ, ಶಿವಾಜಿ ಗೊಂದಳಿ, ಮಾಣಿಕ ಬೀಸೆ, ಶಿವಾಜಿ ಬೋಸಲೆ, ಸಿದ್ದೇಶ್ವರ ಬೋಸಲೆ, ಯಮನೂರ ವಾಕೋಡೆ, ರಾಜು ಗೊಂದಳಿ, ಸುರೇಶ ಗುರುವ, ಸೇರಿದಂತೆ ಅನೇಕ ಗೊಂದಳಿ ಸಮಾಜದ ಬಾಂಧವರು ಇದ್ದರು. ಯುವಕರು ಅತೀ ಉತ್ಸಾಹದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡು ಜೈಶಿವಾಜಿ, ಜೈ ಭವಾನಿ ಎಂಬ ಜೈಕಾರ ಕೂಗುತ್ತಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 