ಆನಂದ್ ಸಿಂಗ್ ಮಗನ ಮದುವೆ ಖರ್ಚನ್ನು ಚುನಾವಣಾ ವೆಚ್ಚಕ್ಕೆ ಸೇರಿಸಬೇಕು: ರಾಯರೆಡ್ಡಿ ಆಗ್ರಹ
ಆನಂದ್ ಸಿಂಗ್ ಮಗನ ಮದುವೆ ಖರ್ಚನ್ನು ಚುನಾವಣಾ ವೆಚ್ಚಕ್ಕೆ ಸೇರಿಸಬೇಕು: ರಾಯರೆಡ್ಡಿ ಆಗ್ರಹ
ಬಳ್ಳಾರಿ: ಅನರ್ಹಗೊಂಡಿರುವ ಶಾಸಕ, ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯಥರ್ಿ ಆನಂದ್ ಸಿಂಗ್ ವಾಮ ಮಾರ್ಗದಿಂದ ಚುನಾವಣೆ ಗೆಲ್ಲಲು ಮುಂದಾಗಿದ್ದಾರೆ ಎಂದು ಮಾಜಿ ಸಚಿವ, ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಬಸವರಾಜ ರಾಯರೆಡ್ಡಿ ಆರೋಪಿಸಿದರು.
ಹೊಸಪೇಟೆ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನಂದ್ ಸಿಂಗ್ ಡಿ.1 ರಂದು ಮಗನ ಮದುವೆಯನ್ನು ಅದ್ದೂರಿಯಾಗಿ ಮಾಡುತ್ತಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಲಿದೆ. ಈ ಬಗ್ಗೆ ಕಾಂಗ್ರೆಸ್ ಚುನಾವಣೆ ಆಯೋಗಕ್ಕೆ ದೂರು ನೀಡಿದೆ.
ಮಗನ ಮದುವೆಯಲ್ಲಿ ಆನಂದ್ ಸಿಂಗ್ ಒಂದು ಊಟಕ್ಕೆ 500 ರೂ.ಯಂತೆ ಸುಮಾರು ಎರಡು ಕೋಟಿ ರೂ. ಖಚರ್ು ಮಾಡುತ್ತಿದ್ದಾರೆ. ಪೆಂಡಾಲ್ ಗೆ ಎರಡು ಕೋಟಿ ರೂ. ಖಚರ್ು ಮಾಡುತ್ತಿದ್ದಾರೆ. ಮದುವೆ ನೆಪದಲ್ಲಿ ಮತದಾರರಿಗೆ 51 ಸಾವಿರ ಗೋಲ್ಡ್ ಕಾಯಿನ್ ಹಂಚಲು ಮುಂದಾಗಿದ್ದಾರೆ. ಈ ಬಗ್ಗೆಯೂ ಕಾಂಗ್ರೆಸ್ ದೂರು ನೀಡಲಿದೆ. ಮದುವೆಯಲ್ಲಿ ಸಿಸಿ ಟಿವಿ ಅಳವಡಿಕೆ ಜತೆಗೆ ವಿಶೇಷ ಸ್ಕ್ವಾಡ್ ಕಳಿಸಬೇಕು. ಎಲ್ಲವನ್ನೂ ಲೆಕ್ಕ ಇಟ್ಟು ಆನಂದ್ ಸಿಂಗ್ ರ ಚುನಾವಣಾ ವೆಚ್ಚಕ್ಕೆ ಸೇರಿಸಬೇಕೆಂದು ಬಸವರಾಜ ರಾಯರೆಡ್ಡಿ ಆಗ್ರಹಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 